ಚಿತ್ರದುರ್ಗ: ಸರ್ಕಾರಿ ಬಸ್​ ಮತ್ತು ಲಾರಿ ಮಧ್ಯೆ ಅಪಘಾತ; ಐವರ ಸಾವು

ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೇಂದ್ರದಿಂದ ಹಿರಿಯೂರಿಗೆ ಸಾಗುವ, ಬೀದರ್-ಶ್ರೀರಂಗಪಟ್ಟಣ ರಸ್ತೆಯಲ್ಲಿ (ರಾಷ್ಟ್ರೀಯ ಹೆದ್ದಾರಿ ನಂಬರ್ 14ರಲ್ಲಿ) ರಾಜ್ಯ ಸರ್ಕಾರಿ ಬಸ್ಸು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಐದು ಮಂದಿ ಸಾವನ್ನಪ್ಪಿದ್ದಾರೆ.
ಬಸ್ಸಿನ ಎಡಭಾಗ ಸಂಪೂರ್ಣ ಜಖಂಗೊಂಡಿದೆ.
ಬಸ್ಸಿನ ಎಡಭಾಗ ಸಂಪೂರ್ಣ ಜಖಂಗೊಂಡಿದೆ.
Updated on

ಹಿರಿಯೂರು: ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೇಂದ್ರದಿಂದ ಹಿರಿಯೂರಿಗೆ ಸಾಗುವ, ಬೀದರ್-ಶ್ರೀರಂಗಪಟ್ಟಣ ರಸ್ತೆಯಲ್ಲಿ (ರಾಷ್ಟ್ರೀಯ ಹೆದ್ದಾರಿ ನಂಬರ್ 14ರಲ್ಲಿ) ರಾಜ್ಯ ಸರ್ಕಾರಿ ಬಸ್ಸು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಐದು ಮಂದಿ ಸಾವನ್ನಪ್ಪಿದ್ದಾರೆ.

ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ(45), ಮಸ್ಕಿಯ ರಮೇಶ್(40)‌, ರಾಯಚೂರಿನ ಮಾಬಮ್ಮ, ಮಾನ್ವಿಯ ನರಸಣ್ಣ ಎಂದು ಗುರುತಿಸಲಾಗಿದೆ. ಇನ್ನೂ ಒಬ್ಬರ ಗುರುತು ಪತ್ತೆಯಾಗಿಲ್ಲ.

ಗಾಯಗೊಂಡ ಎಂಟು ಜನರಲ್ಲಿ ಐವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರಿಗೆ ಚಳ್ಳಕೆರೆ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಯಾಣಿಕರ ಪ್ರಕಾರ, ಕೆಕೆಆರ್‌ಟಿಸಿ ಚಾಲಕ ಅತಿವೇಗ ಮತ್ತು ನಿರ್ಲಕ್ಷತನದಿಂದ ಬಸ್ಸನ್ನು ಚಲಾಯಿಸುತ್ತಿದ್ದ ಎಂದು ತಿಳಿದು ಬಂದಿದೆ. ನಿಧಾನವಾಗಿ ಚಲಿಸುತ್ತಿದ್ದ ಲಾರಿ ಹಿಂದಿಕ್ಕಲು ಯತ್ನಿಸಿದ ವೇಳೆ ಅಪಘಾತ ಸಂಭವಿಸಿದೆ, ಬಸ್ಸಿನ ಎಡಭಾಗ ಸಂಪೂರ್ಣ ಜಖಂಗೊಂಡಿದೆ.

ಡಿಕ್ಕಿಯ ರಭಸಕ್ಕೆ ಬಸ್ ನ ಮುಂದಿನ ಸೀಟುಗಳಲ್ಲಿ ಕುಳಿತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಹಿರಿಯೂರು ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com