ಬೆಂಗಳೂರು: ಮಗಳ ಬಗ್ಗೆ ಅಶ್ಲೀಲ ಕಮೆಂಟ್; ಕುಡಿದ ಮತ್ತಿನಲ್ಲಿ ತಂದೆಯಿಂದ ಸ್ನೇಹಿತನ ಕೊಲೆ

ಕುಡಿದ ಮತ್ತಿನಲ್ಲಿ ಸ್ನೇಹಿತನ ಮಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಗೆ ಪ್ಲಾಸ್ಕ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನ ಮಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಗೆ ಪ್ಲಾಸ್ಕ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆ ಮಾಡಿ ಬಳಿಕ ಶವವನ್ನು ಸ್ಥಳಾಂತರ ಮಾಡಲು ಹೋಗಿ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಸೀಗೆಹಳ್ಳಿ ನಿವಾಸಿ ತೇಜೇಶ್ವರ್‌ ಕೊಲೆಯಾದ ವ್ಯಕ್ತಿ. ಆರೋಪಿ ಧರ್ಮೇಂದ್ರ ಸಿಂಗ್‌ನನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮದ್ಯ ವ್ಯಸನಿಯಾಗಿದ್ದ. ಬೆಳಿಗ್ಗೆಯೇ ಮದ್ಯ ಸೇವಿಸಿ ಕೆಲಸಕ್ಕೆ ತೆರಳುತ್ತಿದ್ದ. ಇದರಿಂದ ತೇಜೇಶ್ವರ್ ನನ್ನು ಹೋಟೆಲ್‌ನ ಸೆಕ್ಯೂರಿಟಿ ಕೆಲಸದಿಂದ ತೆಗೆದುಹಾಕಲಾಗಿತ್ತು. ಇಬ್ಬರು ನೇಪಾಳ ಮೂಲದವರಾಗಿದ್ದಾರೆ.

ಬುಧವಾರ ಬೆಳಿಗ್ಗೆ ಆರೋಪಿ ಸೇರಿದಂತೆ ನಾಲ್ವರು ಬಾರ್‌ವೊಂದಕ್ಕೆ ತೆರಳಿ ಮದ್ಯ ಸೇವಿಸಿದ್ದರು. ಮಧ್ಯಾಹ್ನದ ಬಳಿಕ ಕೊಲೆಯಾದ ವ್ಯಕ್ತಿ ಹಾಗೂ ಆರೋಪಿ ಮನೆಯೊಂದರಲ್ಲಿ ಪಾರ್ಟಿ ನಡೆಸುತ್ತಿದ್ದರು. ಆಗ ಪುತ್ರಿಯ ಬಗ್ಗೆ ಕೀಳಾಗಿ ಮಾತನಾಡಿದ್ದಾನೆ ಎಂದು ಆರೋಪಿಸಿ, ತೇಜೇಶ್ವರ್‌ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ಮೂಲಗಳು ಹೇಳಿವೆ.

ಮೃತದೇಹವನ್ನು ಮನೆಯಿಂದ ಹೊರಕ್ಕೆ ಸಾಗಿಸುವಂತೆ ಪರಿಚಯಸ್ಥ ವ್ಯಕ್ತಿಗೆ ಆರೋಪಿ ಕರೆ ಮಾಡಿದ್ದ. 10 ಸಾವಿರ ರು. ನೀಡುವುದಾಗಿಯೂ ಹೇಳಿದ್ದ. ವ್ಯಕ್ತಿ ನೀಡಿದ ಮಾಹಿತಿಯಂತೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಘಟನೆ ನಡೆದ ವೇಳೆ ಆರೋಪಿ ಹೆಂಡತಿ ಕೆಲಸಕ್ಕೆ ಮತ್ತು ಮಕ್ಕಳು ಶಾಲೆಗೆ ತೆರಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com