ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸಾಯಲೆಂದು ಧರ್ಮಸ್ಥಳಕ್ಕೆ ಹೋಗಿದ್ದ ಬಾಲಕಿ: ಮರಳಿ ಬಂದು ಅಪಾರ್ಟ್ ಮೆಂಟ್ ನಿಂದ ಜಿಗಿದು ಆತ್ಮಹತ್ಯೆ!

ಅಪಾರ್ಟ್ಮೆಂಟ್ ನಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ.
Published on

ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ.

ವಿಜಯಲಕ್ಷ್ಮಿ (17) ವರ್ಷ ಮೃತ ಬಾಲಕಿ. ಬೆಂಗಳೂರಿನ ಬ್ಯಾಟರಾಯನಪುರ ನಿವಾಸಿಯಾಗಿದ್ದಾಳೆ. ಇಲ್ಲಿನ ಬ್ರೈಡ್ ಅಪಾರ್ಟ್​​ಮೆಂಟ್​​ನ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಖಿನ್ನತೆಗೊಳಗಾಗಿದ್ದ ಯುವತಿ ಈ ಹಿಂದೆ ಆತ್ಮಹತ್ಯೆ ಮಾಡಿಕೊಳ್ಳಲು ಧರ್ಮಸ್ಥಳಕ್ಕೆ ಹೋಗಿದ್ದಳು. ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಸ್ಥಳೀಯರೊಬ್ಬರು ರಕ್ಷಣೆ ಮಾಡಿ ಪೋಷಕರಿಗೆ ಪೋನ್ ಮಾಡಿ ಬುದ್ಧಿ ಹೇಳಿ ಕಳುಹಿಸಿದ್ದರು. ಪುತ್ರಿ ಕಾಣೆಯಾಗಿದ್ದ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ಕೂಡಾ ದಾಖಲಾಗಿತ್ತು.

ಧರ್ಮಸ್ಥಳ ದಿಂದ ಬೆಂಗಳೂರಿಗೆ ವಾಪಸ್ ಬಂದ ಬಾಲಕಿ ತಾನು ಪ್ರಾಣ ಕಳೆದುಕೊಳ್ಳುವ ನಿರ್ಧಾರದಿಂದ ಮಾತ್ರ ಹೊರಗೆ ಬಂದಿರಲಿಲ್ಲ. ಅಪಾರ್ಟ್​​ಮೆಂಟ್​​ನ ಟೆರೆಸ್ ಮೇಲಿಂದ ಬಿದ್ದು ಆತ್ಮಹತ್ಯೆ. ಖಿನ್ನತೆಗೊಳಗಾಗಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com