social_icon

ದಕ್ಷತೆಯಿಂದ ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆಯ ಹೆಸರು ತನ್ನಿ, ಇಲ್ಲವೇ ಜಾಗ ಖಾಲಿ ಮಾಡಿ: ಅಧಿಕಾರಿಗಳಿಗೆ ಡಿಸಿಎಂ ವಾರ್ನಿಂಗ್

ಒಂದೋ ದಕ್ಷತೆಯಿಂದ ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಡಿ, ಇಲ್ಲವೇ ಜಾಗ ತೆರವು ಮಾಡಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಎಲ್ಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

Published: 26th September 2023 01:13 PM  |   Last Updated: 26th September 2023 02:16 PM   |  A+A-


DK shivakumar

ಡಿ.ಕೆ ಶಿವಕುಮಾರ್

Posted By : Shilpa D
Source : Express News Service

ಬೆಂಗಳೂರು: ಒಂದೋ ದಕ್ಷತೆಯಿಂದ ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಡಿ, ಇಲ್ಲವೇ ಜಾಗ ತೆರವು ಮಾಡಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಎಲ್ಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ಜಿಲ್ಲಾ ಪಂಚಾಯಿತಿ (ಜೆಡ್‌ಪಿ) ಕಚೇರಿಯಲ್ಲಿ ಸೋಮವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ಸಭೆಯಲ್ಲಿ ಮಾತನಾಡಿದ ಅವರು, ಸಭೆಗೆ ಗೈರು ಹಾಜರಾದ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಕಾಂತರಾಜ್‌ ಅವರಿಗೆ ಸೂಚಿಸಿದರು.

ಬನಶಂಕರಿಯಲ್ಲಿರುವ ಬೆಂಗಳೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ 2023-24ನೇ ಸಾಲಿನ ಮೊದಲ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಗ್ರಾಮ ಮತ್ತು ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸ್ಥಿತಿಗತಿ ಅರಿತು ಸಮಸ್ಯೆ ಪರಿಹರಿಸಲು ಆದ್ಯತೆ ನೀಡಬೇಕು. ಮಳೆ ಕೊರತೆಯಿಂದ ನೀರಿನ ಸಮಸ್ಯೆ ತಲೆದೋರಿದ್ದು, ನಿವಾರಣೆಗೆ ಕ್ರಮಕೈಗೊಳ್ಳಬೇಕು' ಎಂದು ಶಿವಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ನಮಗೆ ಅಧಿಕಾರ ಮುಖ್ಯವಲ್ಲ, ರಾಜ್ಯದ ರೈತರ ಹಿತ ಮುಖ್ಯ: ಸಿಎಂ ಸಿದ್ದರಾಮಯ್ಯ

ನೀರಿನ ಕೊರತೆಯಿಂದ ಜನರು ಹೇಗೆ ನರಳುತ್ತಿದ್ದಾರೆ ಎಂಬ ಮಾಹಿತಿಯ ಕೊರತೆಗಾಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಶುದ್ಧ ನೀರು ಸರಬರಾಜು ಘಟಕಗಳಿಂದ ಪ್ರತಿದಿನ ಎಷ್ಟು ನೀರು ಸರಬರಾಜು ಮಾಡಲಾಗುತ್ತಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿಲ್ಲ. ಸಭೆಗೆ ತಯಾರಾಗದೆ ಬಂದಿದ್ದಕ್ಕೆ ಶಿವಕುಮಾರ್ ಕಿಡಿ ಕಾರಿದ್ದಾರೆ.

“ನೀವು ನಿಮ್ಮದೇ ಲೋಕದಲ್ಲಿದ್ದೀರಿ. ಪ್ರಮುಖ ಬೆಳವಣಿಗೆಗಳನ್ನು ಜಿಲ್ಲಾ ಸಚಿವರಿಗೆ ವರದಿ ಮಾಡುವ ಸೌಜನ್ಯ ಇಲ್ಲವೇ? ಈ ಬೆಳವಣಿಗೆಗಳ ಬಗ್ಗೆ ಏಕೆ ಮಾಹಿತಿ ನೀಡುತ್ತಿಲ್ಲ ಎಂದು ಶಿವಕುಮಾರ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸುಮಾರು 110 ಹಳ್ಳಿಗಳನ್ನು ಸೇರಿಸಲಾಗಿದೆ ಆದರೆ ಇನ್ನೂ ಅಭಿವೃದ್ಧಿ ಹೊಂದಿಲ್ಲ ಮತ್ತು ಅಸ್ಥಿರವಾಗಿದೆ, ಅವುಗಳನ್ನು ಒಂದು ದಶಕದ ಹಿಂದೆ ಪುರಸಭೆಯ ವ್ಯಾಪ್ತಿಗೆ ತರಲಾಯಿತು. ಈ ಅವ್ಯವಸ್ಥೆಗೆ ಜಿಲ್ಲಾ ಪಂಚಾಯತ್ ಹಾಗೂ ಇತರೆ ಸ್ಥಳೀಯಾಡಳಿತ ಅಧಿಕಾರಿಗಳು ಹೊಣೆಗಾರರಾಗಿದ್ದು, ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರ ಕೆಲಸವನ್ನು ಸಮಾನವಾಗಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಡಿಕೆ ಶಿವಕುಮಾರ್ ಗಂಭೀರವಾಗಿ- ವಿವೇಚನೆಯಿಂದ ವರ್ತಿಸಬೇಕು: ಕುರುಬೂರು ಶಾಂತಕುಮಾರ್

ರಸ್ತೆ ಬದಿಯಲ್ಲಿ ಕಸ, ವೈದ್ಯಕೀಯ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ತಪ್ಪಿತಸ್ಥರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು. ಕಸ ವಿಲೇವಾರಿ ಕುರಿತು ಸಮಗ್ರ ವರದಿ ನೀಡುವಂತೆಯೂ ತಿಳಿಸಿದ್ದಾರೆ.

ಅಕ್ರಮವಾಗಿ ತ್ಯಾಜ್ಯ ಸಾಗಿಸುವ ವಾಹನಗಳ ಬಗ್ಗೆ ಜಿಲ್ಲಾಧಿಕಾರಿ, ಸಿಇಒ, ಪೊಲೀಸ್ ಅಧಿಕಾರಿಗಳು, ಆರ್‌ಟಿಒ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸಭೆ ನಡೆಸುವಂತೆ ಸೂಚಿಸಿದರು. ತಾಲ್ಲೂಕು ಪಂಚಾಯ್ತಿ ಮತ್ತು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಆದಾಯ ಗಳಿಕೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ತಿಳಿಸಿದರು.


Stay up to date on all the latest ರಾಜ್ಯ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp