ಭೀಕರ ಬರ: ಬಳ್ಳಾರಿ ಜಿಲ್ಲೆಯಲ್ಲಿ 73 ಸಾವಿರ ಹೆಕ್ಟೇರ್ ಗಿಂತಲೂ ಅಧಿಕ ಕೃಷಿ ಭೂಮಿಯಲ್ಲಿ ಬೆಳೆ ನಷ್ಟ!

ಜಿಲ್ಲೆಯಲ್ಲಿ ಬರಗಾಲಕ್ಕೆ ತುತ್ತಾಗಿರುವ 73,813 ಹೆಕ್ಟೇರ್ ಕೃಷಿ ಭೂಮಿಯನ್ನು ಸಮೀಕ್ಷೆ ನಡೆಸಿ ಜಿಲ್ಲಾಡಳಿತ ಗುರುತಿಸಿದೆ. ರಾಜ್ಯ ಸರಕಾರಕ್ಕೆ ಆಡಳಿತ ಕಳುಹಿಸಿರುವ ವರದಿ ಪ್ರಕಾರ 569 ಕೋಟಿ ರೂಪಾಯಿಗಳಷ್ಟು ಬೆಳೆ ನಷ್ಟವಾಗಿದ್ದು, ಜಿಲ್ಲೆಯಲ್ಲಿ ಕಳೆದ ಹತ್ತು ವರ್ಷಗಳಲ್ಲಿಯೇ ಅತಿ ಹೆಚ್ಚು ಬೆಳೆ ನಷ್ಟವಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬಳ್ಳಾರಿ: ಜಿಲ್ಲೆಯಲ್ಲಿ ಬರಗಾಲಕ್ಕೆ ತುತ್ತಾಗಿರುವ 73,813 ಹೆಕ್ಟೇರ್ ಕೃಷಿ ಭೂಮಿಯನ್ನು ಸಮೀಕ್ಷೆ ನಡೆಸಿ ಜಿಲ್ಲಾಡಳಿತ ಗುರುತಿಸಿದೆ. ರಾಜ್ಯ ಸರಕಾರಕ್ಕೆ ಆಡಳಿತ ಕಳುಹಿಸಿರುವ ವರದಿ ಪ್ರಕಾರ 569 ಕೋಟಿ ರೂಪಾಯಿಗಳಷ್ಟು ಬೆಳೆ ನಷ್ಟವಾಗಿದ್ದು, ಜಿಲ್ಲೆಯಲ್ಲಿ ಕಳೆದ ಹತ್ತು ವರ್ಷಗಳಲ್ಲಿಯೇ ಅತಿ ಹೆಚ್ಚು ಬೆಳೆ ನಷ್ಟವಾಗಿದೆ.

ಜಿಲ್ಲೆಯಲ್ಲಿ ಈ ವರ್ಷ ವಾಡಿಕೆ ಸರಾಸರಿಗಿಂತ ಶೇ.35ರಷ್ಟು ಕಡಿಮೆ ಮಳೆಯಾಗಿದೆ. ದಾಳಿಂಬೆ, ಅಂಜೂರ, ಭತ್ತ, ಮೆಣಸಿನಕಾಯಿ ಮತ್ತು ತೋಟಗಾರಿಕೆ ಬೆಳೆಗಳು ತೀವ್ರವಾಗಿ ಹಾನಿಗೊಳಗಾಗಿವೆ. ಜಿಲ್ಲೆಯ ಎಲ್ಲ 14 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಜಂಟಿಯಾಗಿ ಬರ ಸಮೀಕ್ಷೆಯನ್ನು ನಡೆಸಿದ್ದು, ಸೆಪ್ಟೆಂಬರ್ 30 ರವರೆಗೆ ನಡೆಯಲಿದೆ, ಬರಪೀಡಿತ ಪ್ರದೇಶಗಳ ವ್ಯಾಪ್ತಿಯ ಅಂತಿಮ ಅಂಕಿಅಂಶಗಳು ಸ್ವಲ್ಪ ಭಿನ್ನವಾಗಿರಬಹುದು ಎಂದು ಅವರು ಹೇಳಿದರು. ಜಿಲ್ಲೆಯಲ್ಲಿ ಭತ್ತ ಮತ್ತು ಮೆಣಸಿನಕಾಯಿ ಪ್ರಮುಖ ಬೆಳೆಗಳು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ, ಶೇ 33 ಕ್ಕಿಂತ ಹೆಚ್ಚು ಹಾನಿಯಾಗಿದ್ದರೆ ಮಾತ್ರ ಬೆಳೆ ನಷ್ಟವಾಗಿದೆ.

ನಾವು ಬೆಳೆ ನಷ್ಟದ ವರದಿಯನ್ನು ಸಲ್ಲಿಸಿದ ನಂತರ, ರಾಜ್ಯ ಸರ್ಕಾರ ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸುತ್ತದೆ ಮತ್ತು ನಂತರ ಕೇಂದ್ರ ತಂಡ ಜಿಲ್ಲೆಗೆ ಭೇಟಿ ನೀಡಲಿದೆ. 26,5556 ಹೆಕ್ಟೇರ್‌ನಲ್ಲಿ ಹತ್ತಿ, 12,782 ಹೆಕ್ಟೇರ್‌ನಲ್ಲಿ ಮೆಣಸಿನಕಾಯಿ ಮತ್ತು 26,963 ಹೆಕ್ಟೇರ್‌ನಲ್ಲಿ ಭತ್ತ ಮತ್ತು 5,899 ಹೆಕ್ಟೇರ್‌ಗೂ ಹೆಚ್ಚು ತೋಟಗಾರಿಕೆ ನಷ್ಟವಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com