social_icon

ಕರ್ನಾಟಕ ಬಂದ್ ಸಂಪೂರ್ಣ ಶಾಂತಿಯುತ: ಡಿಕೆ ಶಿವಕುಮಾರ್; ಅ.5ಕ್ಕೆ ಕೆಆರ್‌ಎಸ್ ಗೆ ಮುತ್ತಿಗೆ ಎಂದ ವಾಟಾಳ್ ನಾಗರಾಜ್

ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ವರದಿಯಾಗದೆ ಕರ್ನಾಟಕ ಬಂದ್ ಸಂಪೂರ್ಣ ಶಾಂತಿಯುತವಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ತಿಳಿಸಿದರು.

Published: 29th September 2023 03:04 PM  |   Last Updated: 29th September 2023 08:44 PM   |  A+A-


DK shivakumar

ಡಿಕೆ ಶಿವಕುಮಾರ್

Posted By : Ramyashree GN
Source : IANS

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ವರದಿಯಾಗದೆ ಕರ್ನಾಟಕ ಬಂದ್ ಸಂಪೂರ್ಣ ಶಾಂತಿಯುತವಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಅಪಾರ ಸಹಕಾರ ನೀಡಿದ್ದಾರೆ. ಬಂದ್‌ಗೆ ಕರೆ ನೀಡದಂತೆ ಮನವಿ ಮಾಡಿದ್ದೇವೆ. ಆದರೂ, ಕರೆ ನೀಡಿರುವ ಕರ್ನಾಟಕ ಬಂದ್ ಶಾಂತಿಯುತವಾಗಿದ್ದು, ಸುರಕ್ಷಿತವಾಗಿ ನಡೆದಿದೆ ಎಂದು ಅವರು ಹೇಳಿದ್ದಾರೆ.

ಕಾವೇರಿ ನೀರು ನಿರ್ವಹಣಾ ಮಂಡಳಿ ಸಭೆ ನಡೆಸಲಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯವನ್ನು ಪ್ರತಿನಿಧಿಸಲು ತಂಡವನ್ನು ಕಳುಹಿಸಲಾಗಿದೆ ಮತ್ತು ನೀರು ಬಿಡಲು ಸಾಧ್ಯವಿಲ್ಲ ಎಂದು ತಿಳಿಸಲಾಗಿದೆ ಎಂದರು. 

ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸಂಕಷ್ಟ ಸೂತ್ರ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಹಿರಿಯ ಮಾಜಿ ವಕೀಲರು ಮತ್ತು ಕರ್ನಾಟಕದ ನ್ಯಾಯಾಧೀಶರೊಂದಿಗೆ ಸಭೆ ನಡೆಸಲಾಗುವುದು.

ಇದೇ ವೇಳೆ, ಬೆಂಗಳೂರಿನ ಟೌನ್ ಹಾಲ್‌ನಲ್ಲಿ ಪ್ರತಿಭಟನೆ ನಡೆಸಲು ಯತ್ನಿಸಿದ ವಾಟಾಳ್ ನಾಗರಾಜ್, ಪ್ರವೀಣ್ ಶೆಟ್ಟಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ರಾಜ್ಯಾದ್ಯಂತ ಕಾವೇರಿ ಬಂದ್ ತೀವ್ರ, ಸಿಎಂ ಸಿದ್ದರಾಮಯ್ಯ ಭೇಟಿಯಾದ ಗೃಹ ಸಚಿವ ಪರಮೇಶ್ವರ್!

ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಆದರೆ, ಸರ್ಕಾರ ನಿಷೇಧಾಜ್ಞೆ ಜಾರಿಗೊಳಿಸಿ ಪ್ರತಿಭಟನಾ ಮೆರವಣಿಗೆಗೆ ಅನುಮತಿ ನಿರಾಕರಿಸಿತ್ತು.

ಕೆಆರ್‌ಎಸ್ ಅಣೆಕಟ್ಟೆಗೆ ಮುತ್ತಿಗೆ: ವಾಟಾಳ್ ನಾಗರಾಜ್

ಬಂದ್‌ಗೆ ಕರೆ ನೀಡಿದ ಪ್ರಮುಖರಲ್ಲಿ ಒಬ್ಬರಾದ ವಾಟಾಳ್ ನಾಗರಾಜ್ ಅವರನ್ನು ಬಿಡುಗಡೆ ಮಾಡಿದ ಪೊಲೀಸರು, ಪ್ರತಿಭಟನೆಗಾಗಿ ಸರ್ಕಾರ ನಿಗದಿಪಡಿಸಿದ ಫ್ರೀಡಂ ಪಾರ್ಕ್‌ಗೆ ವಾಹನದಲ್ಲಿ ಕರೆತರಲಾಯಿತು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ವಾಟಾಳ್ ನಾಗರಾಜ್, ಅಕ್ಟೋಬರ್ 5ರಂದು ಕನ್ನಡಪರ ಸಂಘಟನೆಗಳು ಕೆಆರ್‌ಎಸ್ ಅಣೆಕಟ್ಟೆಗೆ ಮುತ್ತಿಗೆ ಹಾಕುವುದಾಗಿ ಘೋಷಿಸಿದರು. ಕಾರ್ಯಕ್ರಮದಲ್ಲಿ ಸಹಸ್ರಾರು ರೈತರು ಭಾಗವಹಿಸಲಿದ್ದಾರೆ. ಪ್ರತಿಭಟಿಸುವ ಹಕ್ಕನ್ನು ಸಿಎಂ ಸಿದ್ದರಾಮಯ್ಯನವರ ಸರ್ಕಾರ ಕಿತ್ತುಕೊಳ್ಳುತ್ತಿದೆ. ದೆಹಲಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಕನ್ನಡಿಗರ ಸಾಮರ್ಥ್ಯ ತೋರಿಸಲು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಆದರೆ, ಸಿಎಂ ಸಿದ್ದರಾಮಯ್ಯಗೆ ಇದು ಅರ್ಥವಾಗುತ್ತಿಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ: ಕರ್ನಾಟಕ ಬಂದ್: ವಿಮಾನ, ಬಸ್ ಸೇವೆ ರದ್ದತಿಯಿಂದ ಪ್ರಯಾಣಿಕರಿಗೆ ಸಂಕಷ್ಟ!

ಈಮಧ್ಯೆ, ಕರ್ನಾಟಕ ಬಂದ್ ಅಂಗವಾಗಿ ಮಂಡ್ಯ ಜಿಲ್ಲೆಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಲು ಯತ್ನಿಸಿದ 200ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಪ್ರತಿಭಟನೆ ನಡೆಸುತ್ತಿದ್ದ ರೈತರು ಮತ್ತು ಕಾರ್ಯಕರ್ತರು ಏಕಾಏಕಿ ಎಕ್ಸ್‌ಪ್ರೆಸ್‌ವೇ ಪ್ರವೇಶಿಸಿ ವಾಹನ ಸಂಚಾರವನ್ನು ತಡೆಯಲು ಯತ್ನಿಸಿದರು. ಪೊಲೀಸರು ಗುಂಪನ್ನು ಹತ್ತಿಕ್ಕಿದರು. 200ಕ್ಕೂ ಹೆಚ್ಚು ಜನರನ್ನು ಬಂಧಿಸಿದರು ಮತ್ತು ತ್ವರಿತವಾಗಿ ಸಂಚಾರವನ್ನು ಪುನರಾರಂಭಿಸಿದರು.


Stay up to date on all the latest ರಾಜ್ಯ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp