ಸಾವಿನಲ್ಲೂ ಸಾರ್ಥಕತೆ ಮೆರೆದ ಟ್ಯಾಕ್ಸಿ ಚಾಲಕ: ಮಗನ ಅಂಗಾಂಗ ದಾನ ಮಾಡಿದ ಪೋಷಕರು

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟ್ಯಾಕ್ಸಿ ಚಾಲಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಐವರ ಬಾಳಿಗೆ ಬೆಳಕಾಗಿದ್ದಾರೆ.
ಚಾಲಕ ಮದನ್ ಕುಮಾರ್.
ಚಾಲಕ ಮದನ್ ಕುಮಾರ್.
Updated on

ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟ್ಯಾಕ್ಸಿ ಚಾಲಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಐವರ ಬಾಳಿಗೆ ಬೆಳಕಾಗಿದ್ದಾರೆ.

ಟ್ಯಾಕ್ಸಿ ಚಾಲಕನಾಗಿದ್ದ ಮದನ್ ಕುಮಾರ್ ಎಸ್.ವಿ (22) ಅವರು ಸೆಪ್ಟೆಂಬರ್ 24 ರಂದು ದಾಬಸ್ ಪೇಟೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

ಮದನ್ ಅವರ ಕುಟುಂಬಸ್ಥರಾದ ವಿಜಯ್ ಕುಮಾರ್ ಎಸ್.ವಿ ಮತ್ತು ತಾಯಿ ಲಕ್ಷ್ಮೀದೇವಿ, ಸಹೋದರ ಮಂಜುನಾಥ್ ಎಸ್.ವಿ ಅವರು ನೆಲಮಂಗಲದ ಸೋಮಸಾಗರ ತಾನುಗುಂಡ್ಲ ನಿವಾಸಿಗಳಾಗಿದ್ದು, ಇವರು ಮದನ್ ಅವರ ಅಂಗಾಂಗಗಳನ್ನು ದಾನ ಮಾಡುವುದಾಗಿ ತಿಳಿಸಿದ್ದರು.

ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಮದನ್ ಅವರ ಯಕೃತ್ತು ಮತ್ತು ಎಡ ಮೂತ್ರಪಿಂಡವನ್ನು ಯಶವಂತಪುರದ ಸ್ಪರ್ಶ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಕಸಿ ಮಾಡಲಾಗಿದೆ. ಬಲ ಮೂತ್ರಪಿಂಡವನ್ನು ಹೆಚ್ಎಎಲ್ ಮಣಿಪಾಲ್ ಆಸ್ಪತ್ರೆಗೆ, ಹೃದಯವನ್ನು ಜಯದೇವ ಆಸ್ಪತ್ರೆಗೆ ಮತ್ತು ಅವರ ಕಣ್ಣಿನ ಕಾರ್ನಿಯಾವನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಗಿದೆ.

ಸ್ಪರ್ಶ್ ಆಸ್ಪತ್ರೆಯ ಗ್ರೂಪ್ ಸಿಒಒ ಜೋಸೆಫ್ ಪಸಂಘ ಅವರು ಮಾತನಾಡಿ, ನೋವಿನಲ್ಲೂ ಕುಟುಂಬಸ್ಥರು ನಿಸ್ವಾರ್ಥ ಮನೋಭಾವವನ್ನು ತೋರಿದ್ದಾರೆ. ಅಂಗಾಂಗ ದಾನದ ಮೂಲಕ ಮತ್ತೊಂದು ಕುಟುಂಬದ ನೋವನ್ನು ದೂರ ಮಾಡಿದ್ದಾರೆ. ದಾನ ಮಾಡಿದ ಪ್ರತಿಯೊಂದು ಅಂಗವನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲಾಗುತ್ತದೆ. ಇದು ಇತರರಿಗೆ ಹೊಸ ಜೀವನವನ್ನು ನೀಡುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com