ಹಾವೇರಿ: ಕುರಿ ತುಂಬಿದ್ದ ಬೊಲೆರೊ ವಾಹನವೊಂದು ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಹಾಗೂ 20 ಕುರಿಗಳು ಸಾವನ್ನಪ್ಪಿದ ದಾರುಣ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಬಳಿ ಮಂಗಳವಾರ ನಡೆದಿದೆ.
ಇಂದು ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಗುಡ್ಡಪ್ಪ ಕೈದಾಳಿ(40), ಮೈಲಾರಪ್ಪ ಕೈದಾಳಿ(41) ಮತ್ತು ಶಿವರಾಜ್ ಹೊಳೆಪ್ಪನವರ(22) ಮೃತಪಟ್ಟಿದ್ದಾರೆ.
ಬೆಳಗಾವಿಯಿಂದ ಕಾಕೋಳ ಗ್ರಾಮಕ್ಕೆ ಬರುವಾಗ ಮಾರ್ಗಮಧ್ಯೆ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಬೀರಪ್ಪ ದೊಡ್ಡಚಿಕ್ಕಣ್ಣನವರ, ನಿಂಗರಾಜ್ ಹಿತ್ತಲಮನಿ ಮತ್ತು ನಿಂಗಪ್ಪ ಕೊರಗುಂದ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ದಾವಣಗೆರೆ ಮತ್ತು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement