ಚುನಾವಣಾ ವೆಚ್ಚದ ಮೇಲೆ ಕಣ್ಗಾವಲಿಡಲು ವಿಶೇಷ ಅಧಿಕಾರಿ ನೇಮಕ!

ಚುನಾವಣಾ ವೆಚ್ಚ ಮೇಲೆ ಕಣ್ಗಾವಲಿಡಲು ಭಾರತೀಯ ಕಂದಾಯ ಸೇವೆ ಅಧಿಕಾರಿ ಬಿ ಮುರಳಿ ಕುಮಾರ್ ಅವರನ್ನು ವಿಶೇಷ ಅಧಿಕಾರಿಯಾಗಿ ಭಾರತೀಯ ಚುನಾವಣಾ ಆಯೋಗ (ಇಸಿಐ) ಮಂಗಳವಾರ ನೇಮಕ ಮಾಡಿದೆ.
ಚುನಾವಣಾ ಆಯೋಗ (ಸಂಗ್ರಹ ಚಿತ್ರ)
ಚುನಾವಣಾ ಆಯೋಗ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಚುನಾವಣಾ ವೆಚ್ಚ ಮೇಲೆ ಕಣ್ಗಾವಲಿಡಲು ಭಾರತೀಯ ಕಂದಾಯ ಸೇವೆ ಅಧಿಕಾರಿ ಬಿ ಮುರಳಿ ಕುಮಾರ್ ಅವರನ್ನು ವಿಶೇಷ ಅಧಿಕಾರಿಯಾಗಿ ಭಾರತೀಯ ಚುನಾವಣಾ ಆಯೋಗ (ಇಸಿಐ) ಮಂಗಳವಾರ ನೇಮಕ ಮಾಡಿದೆ.

ಅಸ್ತಿತ್ವದಲ್ಲಿರುವ ಚುನಾವಣಾ ವೆಚ್ಚದ ಮೇಲ್ವಿಚಾರಣೆಯನ್ನು ಬಲಪಡಿಸಲು ವೀಕ್ಷಕರನ್ನು ನೇಮಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಕರ್ನಾಟಕವಷ್ಟೇ ಅಲ್ಲದೆ, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು ಮತ್ತು ಉತ್ತರ ಪ್ರದೇಶಗಳಿಗೂ ವಿಶೇಷ ಅಧಿಕಾರಿಯನ್ನು ನೇಮಿಸಲಾಗಿದೆ.

2019ಕ್ಕೆ ಹೋಲಿಸಿದರೆ 2024 ರ ಲೋಕಸಭೆ ಚುನಾವಣೆಗೆ ಚುನಾವಣಾ ನೀತಿ ಸಂಹಿತೆ (MCC) ಜಾರಿಯಾದ ಕೇವಲ 10 ದಿನಗಳಲ್ಲಿ ವಶಪಡಿಸಿಕೊಳ್ಳುವುತ್ತಿರುವುದು ಶೇ.110.12ರಷ್ಟು ಹೆಚ್ಚಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ (CEO) ಕಚೇರಿ ಮಾಹಿತಿ ನೀಡಿದೆ.

ಮಾರ್ಚ್ 16, 2024 ರಿಂದ ಮಾರ್ಚ್ 27, 2024 ರವರೆಗೆ 55.76 ಕೋಟಿ ರೂ ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳೆದ ಆರು ತಿಂಗಳ ಹಿಂದೆ ಎಂಸಿಸಿ, ಪೊಲೀಸರು, ಆದಾಯ ತೆರಿಗೆ, ಅಬಕಾರಿ, ವಾಣಿಜ್ಯ ತೆರಿಗೆ, ಮಾದಕ ದ್ರವ್ಯ ನಿಯಂತ್ರಣ ಡ್ಯೂರೋ ಮತ್ತು ಡಿಆರ್‌ಐ 537.51 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಏಪ್ರಿಲ್ 2, 2024 ರವರೆಗೆ 81,10,26,256 ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಚುನಾವಣಾ ಆಯೋಗ (ಸಂಗ್ರಹ ಚಿತ್ರ)
ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ 20.85 ಕೋಟಿ ರೂಪಾಯಿ ಹಣ, 27 ಕೋಟಿ ರೂ. ಮೌಲ್ಯದ ಮದ್ಯ ವಶ!

ವಿಶೇಷ ಅಧಿಕಾರಿಗಳ ನಿಯೋಜನೆ ಅಸಾಮಾನ್ಯವಾದುದಲ್ಲ. ವಶಪಡಿಸಿಕೊಂಡ ವಸ್ತುಗಳ ವರದಿ ಹಾಗೂ ಅವುಗಳ ಮೇಲೆ ನಿಗಾ ಇಡಲು ಈ ರೀತಿಯ ನಿಯೇಜನೆ ಸಾಮಾನ್ಯವಾಗಿರುತ್ತದೆ. ವಿಶೇಷ ಅಧಿಕಾರಿಯ ನೇಮಕ ಉತ್ತಮ ಸಮನ್ವಯ ಮತ್ತು ಸುಧಾರಿತ ಸಂವಹನಕ್ಕೆ ಸಹಾಯ ಮಾಡುತ್ತದೆ. ಇಲ್ಲಿಯವರೆಗೆ ನಾವು ಸಭೆ ನಡೆಸಿಲ್ಲ. ಅಧಿಕಾರಿಗಳು ಬಂದ ನಂತರ ಸಭೆ ನಡೆಸಿ ಎಲ್ಲ ಒತ್ತುವರಿ ವಿವರ ನೀಡಲಾಗುವುದು. ಮತದಾನದ ದಿನಾಂಕಗಳು ಸಮೀಪಿಸುತ್ತಿದ್ದು,ತಪಾಸಣೆಯನ್ನು ತೀವ್ರಗೊಳಿಸುತ್ತಿದ್ದೇವೆ. ಎಲ್ಲಾ ತಂಡಗಳು ಕಣ್ಗಾವಲನ್ನು ಹೆಚ್ಚಿಸಿದ್ದು, ಬ್ಯಾಂಕ್ ವಹಿವಾಟಿನ ವಿವರಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಚುನಾವಣೆಗಾಗಿ ಚುನಾವಣಾ ಆಯೋಗವು 2,357 ಫ್ಲೈಯಿಂಗ್ ಸ್ಕ್ವಾಡ್, 2,669 ಕಣ್ಗಾವಲು ಪಡೆ, 647 ವಿಡಿಯೋ ಕಣ್ಗಾವಲು, 258 ಲೆಕ್ಕಪತ್ರ ನಿರ್ವಹಣೆ ಮತ್ತು 257 ವಿಡಿಯೋ ವೀಕ್ಷಣೆ ತಂಡಗಳನ್ನು ನಿಯೋಜಿಸಿದೆ. ಅಲ್ಲದೆ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಗೋವಾ ಮತ್ತು ಮಹಾರಾಷ್ಟ್ರದ ಗಡಿಗಳಲ್ಲಿ ಚೆಕ್ ಪೋಸ್ಟ್‌ಗಳಲ್ಲಿ 172 ಪೊಲೀಸರು ಮತ್ತು 40 ಅಬಕಾರಿ ತಂಡಗಳನ್ನು ನಿಯೋಜಿಸಲಾಗಿದೆ. ಇದಲ್ಲದೆ, ಗಡಿಯಲ್ಲಿ 19 ಅರಣ್ಯ ಚೆಕ್ ಪೋಸ್ಟ್ ಮತ್ತು 15 ಸಾರಿಗೆ ಚೆಕ್ ಪೋಸ್ಟ್ಗಳನ್ನೂ ಸ್ಥಾಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com