ಬೆಂಗಳೂರು: ಸಹೋದ್ಯೋಗಿ ಜೊತೆ ಮಾತನಾಡಿದ್ದಕ್ಕೆ ಪತ್ನಿಗೆ ಕತ್ತರಿ, ಚಾಕುವಿನಿಂದ ಹಲ್ಲೆ ನಡೆಸಿದ ಪತಿ!

ತನ್ನ ಸಹೋದ್ಯೋಗಿ ಜೊತೆ ಮಾತನಾಡಿದ್ದಕ್ಕೆ ಪತಿಯೊಬ್ಬ ಪತ್ನಿ ಮೇಲೆ ಚಾಕು ಮತ್ತು ಕತ್ತರಿಯಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ತನ್ನ ಸಹೋದ್ಯೋಗಿ ಜೊತೆ ಮಾತನಾಡಿದ್ದಕ್ಕೆ ಪತಿಯೊಬ್ಬ ಪತ್ನಿ ಮೇಲೆ ಚಾಕು ಮತ್ತು ಕತ್ತರಿಯಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ಜೆ.ಪಿ.ನಗರ 5ನೇ ಹಂತದ ವಿನಾಯಕ ನಗರದ ಕಾವೇರಿ ರಸ್ತೆಯ ನಿವಾಸಿ ಬಿಂದು ನವೀನ್ ಹಲ್ಲೆಗೊಳಗಾಗಿದ್ದು, ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾನುವಾರ ಸಂಜೆ 6 ರಿಂದ 8 ಗಂಟೆಯ ನಡುವೆ ಈ ಘಟನೆ ನಡೆದಿದೆ. ಸಂತ್ರಸ್ತೆಯ 42 ವರ್ಷದ ಪತಿ ನವೀನ್ ಆಕೆಯ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಸಂತ್ರಸ್ತೆಯನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿದ ನಂತರ, ಮೆಡಿಕೋ ಲೀಗಲ್ ಕೇಸ್ ದಾಖಲಿಸಲಾಗಿದೆ ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಬಿಂದು ಹೆಚ್ ಎಸ್ ಆರ್ ಲೇಔಟ್ ನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಇಬ್ಬರು ಮಕ್ಕಳ ತಾಯಿ. ಆಕೆ 2012ರಲ್ಲಿ ನವೀನ್ ಎಂಬಾತನನ್ನು ಮದುವೆಯಾಗಿದ್ದಳು. ಆಕೆ ಯಾರ ಜೊತೆಗಾದರೂ ಫೋನ್ ನಲ್ಲಿ ಮಾತನಾಡಿದರೂ ಆಕೆಯ ಬಗ್ಗೆ ಅನುಮಾನ ವ್ಯಕ್ತ ಪಡಿಸುತ್ತಿದ್ದ. 2023ರಲ್ಲಿ ಬನ್ನೇರುಘಟ್ಟ ಅರಣ್ಯದಲ್ಲಿ ಆಕೆಯ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ್ದ ಎಂದು ಹೇಳಲಾಗಿದೆ.

ಸಾಂದರ್ಭಿಕ ಚಿತ್ರ
ಬೆಂಗಳೂರು: ಹಾಡಹಗಲೇ ವ್ಯಕ್ತಿ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ, ಕಾರಿನ ಡ್ಯಾಶ್ ಕ್ಯಾಮ್ ನಲ್ಲಿ ವಿಡಿಯೋ ದಾಖಲು!

ಭಾನುವಾರ, ಕೆಲಸದ ಬಗ್ಗೆ ಚರ್ಚಿಸಲು ಸಂತ್ರಸ್ತೆಯ ಮನೆಗೆ ಸಹೋದ್ಯೋಗಿ ಬಂದಿದ್ದರು. ತನ್ನ ಪತ್ನಿ ಪುರುಷ ಸಹೋದ್ಯೋಗಿಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಕ್ರೋಶಗೊಂಡ ನವೀನ್ ಆಕೆಯನ್ನು ನಿಂದಿಸಲು ಆರಂಭಿಸಿದ. ಪತ್ನಿ ತನ್ನ ಸಹೋದ್ಯೋಗಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿದ ಪತಿ ಕತ್ತರಿ ಮತ್ತು ಚಾಕು ತೆಗೆದುಕೊಂಡು ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ.

ಆರೋಪಿ ಆಕೆಗೆ ಹಲವು ಬಾರಿ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಆಕೆಯ ಮಗಳು ಅಳುತ್ತಾ ನೆರೆಹೊರೆಯ ಮನೆಗೆ ಧಾವಿಸಿ ಸಹಾಯಕ್ಕಾಗಿ ಯಾಚಿಸಿದ್ದಾಳೆ, ತಕ್ಷಣವೇ ಅಲ್ಲಿಗೆ ಬಂದ ನೆರೆ ಹೊರೆಯವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧ ಪುಟ್ಟೇನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com