ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿಗೆ ಸಂಕಷ್ಟ: ವೈಯಕ್ತಿಕ ಮಾಹಿತಿ ಮುಚ್ಚಿಟ್ರಾ ಸುನೀಲ್ ಬೋಸ್? ನಾಮಪತ್ರ ತಿರಸ್ಕರಿಸುವಂತೆ ಬಿಜೆಪಿ ದೂರು!

ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸಮಾಜ ಕಲ್ಯಾಣ ಸಚಿವ ಎಚ್​ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೊಸ್ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿದಿದ್ದಾರೆ.
ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿಗೆ ಸಂಕಷ್ಟ: ವೈಯಕ್ತಿಕ ಮಾಹಿತಿ ಮುಚ್ಚಿಟ್ರಾ ಸುನೀಲ್ ಬೋಸ್? ನಾಮಪತ್ರ ತಿರಸ್ಕರಿಸುವಂತೆ ಬಿಜೆಪಿ ದೂರು!
Updated on

ಚಾಮರಾನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸಮಾಜ ಕಲ್ಯಾಣ ಸಚಿವ ಎಚ್​ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೊಸ್ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿದಿದ್ದಾರೆ.

ನಾಮಪತ್ರ ಸಲ್ಲಿಕೆಗೆ ನಿನ್ನೆ ಕೊನೆಯ ದಿನವಾಗಿದ್ದರಿಂದ ಈಗಾಗಲೇ ಸುನೀಲ್ ಬೋಸ್ ನಾಮಪತ್ರ ಸಲ್ಲಿಸಿದ್ದರು. ಆದರೆ ನಾಮಪತ್ರದಲ್ಲಿ ಪ್ರಮುಖ ಮಾಹಿತಿಯನ್ನು ತಿಳಿಸಿದ ಮುಚ್ಚಿಟ್ಟಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ತಮ್ಮ ಪ್ರಮಾಣಪತ್ರದಲ್ಲಿ ವೈವಾಹಿಕ ಜೀವನದ ಕುರಿತು ಮಾಹಿತಿ ಮರೆಮಾಚಿದ್ದಾರೆ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸುವಂತೆ ಬಿಜೆಪಿ ನಾಯಕರು ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿಗೆ ಸಂಕಷ್ಟ: ವೈಯಕ್ತಿಕ ಮಾಹಿತಿ ಮುಚ್ಚಿಟ್ರಾ ಸುನೀಲ್ ಬೋಸ್? ನಾಮಪತ್ರ ತಿರಸ್ಕರಿಸುವಂತೆ ಬಿಜೆಪಿ ದೂರು!
ಕೊನೆ ದಿನ ನಾಮಪತ್ರ ಸಲ್ಲಿಕೆ ಭರಾಟೆ: ಕುಮಾರಸ್ವಾಮಿ, ತೇಜಸ್ವಿ ಸೂರ್ಯ, ಮುದ್ದಹನುಮೇಗೌಡ ಸೇರಿ ಹಲವರಿಂದ ಉಮೇದುವಾರಿಕೆ

ಸುನೀಲ್ ಬೋಸ್ ಅವರು ಪ್ರಮಾಣ ಪತ್ರದಲ್ಲಿ ಹೆಂಡತಿ, ಮಕ್ಕಳ, ಕುಟುಂಬದ ಮಾಹಿತಿ ಮುಚ್ಚಿಟ್ಟಿದ್ದಾರೆ. ಅಲ್ಲದೇ ಪತ್ನಿ, ಮಕ್ಕಳು, ತಂದೆ-ತಾಯಿ ಆಸ್ತಿ ವಿವರ ಘೋಷಿಸಿಲ್ಲ. ಹೀಗಾಗಿ ಸುನೀಲ್ ಬೋಸ್ ಅವರ ನಾಮಪತ್ರವನ್ನು ಅಸಿಂಧುಗೊಳಿಸುವಂತೆ ಚಾಮರಾಜನಗರ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜು ಅವರು ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com