ಕೊಳವೆ ಬಾವಿ ಗುರಂತ: ಬದುಕಿ ಬಂದ ಸಾತ್ವಿಕ್‌ ಗೆ ಮರು ನಾಮಕರಣ, ಹೆಸರು 'ಸಿದ್ದಲಿಂಗ'!

ವಿಜಯಪುರದ ಇಂಡಿ ತಾಲ್ಲೂಕಿನಲ್ಲಿ ಕೊಳವೆಬಾವಿಗೆ ಬಿದ್ದು ಪವಾಡ ಸದೃಶ ರೀತಿಯಲ್ಲಿ ಬದುಕಿ ಬಂದ ಮಗು ಸಾತ್ವಿಕ್ ನ ಹೆಸರನ್ನು ಆತನ ಪೋಷಕರು ಬದಲಾವಣೆ ಮಾಡಲು ನಿರ್ಧರಿಸಿದ್ದಾರೆ.
boy falls into borewell in vijayapura
ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ
Updated on

ವಿಜಯಪುರ: ವಿಜಯಪುರದ ಇಂಡಿ ತಾಲ್ಲೂಕಿನಲ್ಲಿ ಕೊಳವೆಬಾವಿಗೆ ಬಿದ್ದು ಪವಾಡ ಸದೃಶ ರೀತಿಯಲ್ಲಿ ಬದುಕಿ ಬಂದ ಮಗು ಸಾತ್ವಿಕ್ ನ ಹೆಸರನ್ನು ಆತನ ಪೋಷಕರು ಬದಲಾವಣೆ ಮಾಡಲು ನಿರ್ಧರಿಸಿದ್ದಾರೆ.

ಕೊಳವೆ ಬಾವಿಯಲ್ಲಿ ಬಿದ್ದಿದ್ದ ತನ್ನ ಮಗುವನ್ನು ಬದುಕಿಸಿಕೊಡುವಂತೆ ದೇವರಲ್ಲಿ ಹರಕೆ ಹೊತ್ತಿದ್ದ ತಾಯಿ ಪೂಜಾ, ಮನೆಯಿಂದ ಮಠದವರೆಗೆ ದೀಡ ನಮಸ್ಕಾರ ಹಾಕಿ, ಮಗುವಿಗೆ ಮರು ನಾಮಕರಣ ಮಾಡುವುದಾಗಿ ಹೇಳಿಕೊಂಡಿದ್ದರು.

boy falls into borewell in vijayapura
ಕೊಳವೆ ಬಾವಿಗೆ ಬಿದ್ದಿದ್ದ ಸಾತ್ವಿಕ್ ಜೀವ ಉಳಿಸಿದ್ದು ಈ ನಾಲ್ಕು 'ನಿರ್ಣಾಯಕ ಅಂಶಗಳು': ವೈದ್ಯರ ಅಚ್ಚರಿಯ ವಿವರಣೆ

ಅದರಂತೆ ಇದೀಗ ಸಾತ್ವಿಕ್ ಮಗುವಿನ ಹೆಸರನ್ನು ಸಿದ್ದಲಿಂಗ ಎಂದು ಬದಲಾಯಿಸಲು ಪೋಷಕರು ನಿರ್ಧರಿಸಿದ್ದಾರೆ. ಬರುವ 28ರಂದು ಪೂಜಾ ತಮ್ಮ ಮನೆಯಿಂದ ಲಚ್ಯಾನ್ ಸಿದ್ದಲಿಂಗ ಮಹಾರಾಜರ ಮಠದ ವರೆಗೆ ದೀಡ ನಮಸ್ಕಾರ ಹಾಕಿ ಮಠದಲ್ಲಿ ತೊಟ್ಟಿಲು ಕಟ್ಟಿ ಮರುನಾಮಕರಣ ಮಾಡಲಿದ್ದಾರೆ.

“ಸಿದ್ದಲಿಂಗ ಮಹಾರಾಜರ ಪವಾಡದಿಂದ ನನ್ನ ಮಗ ಬದುಕಿ ಬಂದಿದ್ದಾನೆ. ಹೀಗಾಗಿ ಸಾತ್ವಿಕ್ ಹೆಸರು ಬದಲಿಗೆ ಸಿದ್ದಲಿಂಗ ಎಂಬ ಹೆಸರನ್ನು ನಾಮಕರಣ ಮಾಡುತ್ತೇವೆ. ರಕ್ಷಣೆ ಮಾಡಿದ ಎಲ್ಲ ಸಿಬ್ಬಂದಿಗೆ ಜಿಲ್ಲಾಡಳಿತಕ್ಕೆ ಧನ್ಯವಾದ ಹೇಳುತ್ತೇನೆ,” ಎಂದು ಮಗುವಿನ ತಾಯಿ ಪೂಜಾ ಹೇಳಿದ್ದಾರೆ. ಚಿಕಿತ್ಸೆ ನೀಡಿದ ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿಗೂ ಅವರು ಧನ್ಯವಾದ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com