ಬೆಂಗಳೂರು: ಭ್ರಷ್ಠ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರ ದಾಳಿ ಮುಂದುವರಿದಿದೆ. 9 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ರೆಡ್ಹ್ಯಾಂಡಾಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾರೆ.
ಹೊಟೇಲ್ ವೊಂದರ ಪರವಾನಗಿ ಕೊಡಲು ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಭೋಪಾಲ್ 9 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟದ್ದ. ಈ ಬಗ್ಗೆ ಮಂಗಳೂರು ಮೂಲದ ಹೊಟೇಲ್ ಮಾಲೀಕ ದೀಕ್ಷಿತ್ ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು.
ಲಂಚ ಪಡೆಯುತ್ತಿದ್ದಾಗ ಕಾರ್ಮಿಕ ಭವನದಲ್ಲೇ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.
Advertisement