ಬೆಂಗಳೂರು; ಗ್ರಹಣಕ್ಕೆ ಸಂಬಂಧಿಸಿದ ಪುರಾಣ ಮತ್ತು ಮೂಢನಂಬಿಕೆಗಳನ್ನು ಹೋಗಲಾಡಿಸಲು ಮೂಢನಂಬಿಕೆ ವಿರೋಧಿ ಒಕ್ಕೂಟದ ಕಾರ್ಯಕರ್ತರು ಸೋಮವಾರ ಜಾಗೃತಿ ಮೂಡಿಸಿದರು.
ಸೋಮವಾರ ನಗರದ ಪುರಭವನದ ಮೆಟ್ಟಿಲುಗಳ ಮೇಲೆ ಸಮೋಸಾ, ಬಜ್ಜಿ ಹಾಗೂ ಹಣ್ಣುಗಳು ಸೇರಿದಂತೆ ಮತ್ತಿತರ ಆಹಾರ ಪದಾರ್ಥಗಳನ್ನು ಸೇವಿಸಿ ಚಹಾ ಕುಡಿಯುವ ಮೂಲಕ ಗ್ರಹಣದ ಆಚರಣೆಯನ್ನು ಖಂಡಿಸಿದರು.
ಮೂಡಾಂಬಿಕೆ ವಿರೋಧ ಒಕ್ಕೂಟದ ಸಂಸ್ಥಾಪಕ ನರಸಿಂಹ ಮೂರ್ತಿ, ಸೂರ್ಯಗ್ರಹಣ, ಚಂದ್ರಗ್ರಹಣ ಪ್ರತಿ ವರ್ಷ ನಡೆಯುವ ಪ್ರಕ್ರಿಯೆ. ಆದರೆ, ಕೆಲ ಜ್ಯೋತಿಷಿಗಳು ಇಲ್ಲಸಲ್ಲದ ವಿವರಣೆ ಕೊಡುತ್ತಾರೆ. “ಗರ್ಭಿಣಿಯರು ಹೊರಗೆ ಹೋಗಬಾರದು, ಊಟ ಮಾಡಬಾರದು ಎಂದು ಜನರಿಗೆ ಕೆಲವು ಪ್ರಸ್ತುತವಲ್ಲದ ಸಲಹೆ ನೀಡುತ್ತಾರೆ. ಇವೆಲ್ಲ ಮೂಢನಂಬಿಕೆಗಳಾಗಿವೆ. ಜನರು ಇಂತಹ ಜ್ಯೋತಿಷಿಗಳನ್ನು ನಿರ್ಲಕ್ಷಿಸಬೇಕು. ಹೀಗಾಗಿ ಅರಿವು ಮೂಡಿಸಲು ಅಭಿಯಾನವನ್ನು ನಡೆಸಿದ್ದೇವೆಂದು ಹೇಳಿದರು.
ಜನರಿಗೆ ಸರಿಯಾದ ವೈಜ್ಞಾನಿಕ ದಾರಿ ತೋರಿಸಲು ಸುಮಾರು 20 ವರ್ಷದಿಂದ ಮೂಢ ನಂಬಿಕೆ ವಿರೋಧಿ ಒಕ್ಕೂಟದಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂಂದು ತಿಳಿಸಿದರು.
Advertisement