ನರೇಂದ್ರ ಮೋದಿ 3ನೇ ಅವಧಿಗೆ ಪ್ರಧಾನಿ; ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲ್ಲ: ಭವಿಷ್ಯ ನುಡಿದಿದ್ದೇನು?

ಮಂಗಳವಾರ ಯುಗಾದಿ ಹಬ್ಬದ ಶುಭದಿನದಂದು ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಯ ಹೆಚ್ಚಿನ ಸಂಖ್ಯೆಯ ಜನರು ನಂಬುವ ಭವಿಷ್ಯ ಹೇಳುವ ಮಂದಿ ಸತತ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on

ಬೆಂಗಳೂರು: ಮಂಗಳವಾರ ಯುಗಾದಿ ಹಬ್ಬದ ಶುಭದಿನದಂದು ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಯ ಹೆಚ್ಚಿನ ಸಂಖ್ಯೆಯ ಜನರು ನಂಬುವ ಭವಿಷ್ಯ ಹೇಳುವ ಮಂದಿ ಸತತ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ಮಾರ್ವಾಡಿ ಬಗೀಚದಲ್ಲಿ ಭವಿಷ್ಯ ಹೇಳುವ ಇಲಾಲ ಪರಂಪರೆಯ ಮಲ್ಲಿಕಾರ್ಜುನ ಗೋಬಿ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿಯಾಗುವ ಮುನ್ಸೂಚನೆ ನೀಡಿದ್ದಾರೆ.

ಹಲವಾರು ವರ್ಷಗಳಿಂದ ಭವಿಷ್ಯ ನುಡಿಯುತ್ತಿರುವ ಅವರು, ಈ ವರ್ಷದ ಆರಂಭಕ್ಕೂ ಮುನ್ನ ಮಳೆ ಮತ್ತು ಬೆಳೆಗಳ ಕುರಿತು ಭವಿಷ್ಯ ನುಡಿದಿದ್ದರು ಮತ್ತು ಈ ಪ್ರದೇಶದಲ್ಲಿ ತೊಗರಿ ಮತ್ತು ರಾಗಿ ಬೆಳೆಗಳು ಕೀಟಗಳಿಂದ ಹಾನಿಗೊಳಗಾಗುತ್ತವೆ ಎಂದಿದ್ದರು. ಈ ಭವಿಷ್ಯವಾಣಿಗಳ ಪ್ರಕಾರ ಇಲ್ಲಿನ ಸಾವಿರಾರು ರೈತರು ಮತ್ತು ಸಾಂಪ್ರದಾಯಿಕ ಉಡುಗೆ ತಯಾರಕರು ತಮ್ಮ ಜೀವನದಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳುತ್ತಾರೆ.

ಪ್ರಧಾನಿ ನರೇಂದ್ರ ಮೋದಿ
ದೇಶದಲ್ಲಿ ಮೋದಿ ಅಲೆ ಇಲ್ಲ, ಬಿಜೆಪಿ 200 ಸ್ಥಾನವನ್ನೂ ಗೆಲ್ಲಲ್ಲ: ಡಿಕೆ ಶಿವಕುಮಾರ್ ಭವಿಷ್ಯ

ಇದೇ ವೇಳೆ ಧಾರವಾಡ ಜಿಲ್ಲೆಯ ಬೆಟಗೇರಿ ಪಟ್ಟಣ ಸಮೀಪದ ಹನುಮನಕೊಪ್ಪ ಗ್ರಾಮದಲ್ಲಿ ಖ್ಯಾತ ಬೊಂಬೆ ಭವಿಷ್ಯ ನುಡಿದಿದ್ದು, ರಾಜ್ಯ ಹಾಗೂ ಕೇಂದ್ರ ರಾಜಕಾರಣದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ, ಪ್ರಧಾನಿ ಮೋದಿ ಅವರು ಕೇಂದ್ರದಲ್ಲಿ ಮೂರನೇ ಅವಧಿಗೆ ಅಧಿಕಾರಕ್ಕೆ ಬರುತ್ತಾರೆ ಎಂಬುದನ್ನು ಸೂಚಿಸುತ್ತಿದೆ.

ಸಾಂಪ್ರದಾಯಿಕ ಬೊಂಬೆ ಭವಿಷ್ಯವನ್ನು 1936 ರಿಂದ ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಅನುಸರಿಸುತ್ತಿದ್ದಾರೆ.

ಈ ಹಿಂದೆ, ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದ್ದು, ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಬೊಂಬೆ ಭವಿಷ್ಯ ನುಡಿದಿತ್ತು.

ಯುಗಾದಿ ಹಬ್ಬದ ಮುನ್ನ ಹುಣ್ಣಿಮೆ ದಿನದಂದು ಬೊಂಬೆಗಳನ್ನು ಸ್ಥಳೀಯ ಹೊಳೆಯ ದಡದಲ್ಲಿ ನಾಲ್ಕು ದಿಕ್ಕುಗಳಲ್ಲಿ ಸ್ಥಾಪಿಸಲಾಗುತ್ತದೆ. ಮರುದಿನ, ಭವಿಷ್ಯಕಾರರು ನಿರ್ದಿಷ್ಟ ದಿಕ್ಕುಗಳಲ್ಲಿನ ಬೊಂಬೆಗಳನ್ನು ವಿಶ್ಲೇಷಿಸುತ್ತಾರೆ ಮತ್ತು ಮಳೆ ಮತ್ತು ಬೆಳೆ ಸೇರಿದಂತೆ ಇತರ ವಿಷಯಗಳ ಬಗ್ಗೆ ಭವಿಷ್ಯ ನುಡಿಯುತ್ತಾರೆ.

ಪ್ರಧಾನಿ ನರೇಂದ್ರ ಮೋದಿ
ಲೋಕಸಭಾ ಚುನಾವಣೆ ಬಳಿಕ ಸಿದ್ದು ಸರ್ಕಾರ ಪತನ: ಜಗದೀಶ್ ಶೆಟ್ಟರ್ ಭವಿಷ್ಯ

ಈ ಬೊಂಬೆಗಳಿಗೆ ಹಾನಿಯಾದರೆ ಅಧಿಕಾರವೇ ಬದಲಾಗುತ್ತದೆ ಎಂದು ವಿಶ್ಲೇಷಿಸಲಾಗಿದೆ. ಈ ಬಾರಿ ಬೊಂಬೆಗಳು ಸುರಕ್ಷಿತವಾಗಿದ್ದು, ಯಾವುದೇ ಭಾಗಕ್ಕೆ ಹಾನಿಯಾಗಿಲ್ಲ. ಈ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಮಟ್ಟದಲ್ಲಿ ಅಧಿಕಾರಕ್ಕೆ ತೊಂದರೆಯಾಗುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com