ಕಾರ್ಖಾನೆ ಸ್ಥಾಪನೆಗೆ ಬೆಂಗಳೂರು ವಿಮಾನ ನಿಲ್ದಾಣದ ಬಳಿ ಭೂಮಿಗೆ ಲೆನ್ಸ್‌ಕಾರ್ಟ್ ಬೇಡಿಕೆ: ಕೆಲವೇ ಕ್ಷಣಗಳಲ್ಲಿ ರಾಜ್ಯ ಸರ್ಕಾರ ಸ್ಪಂದನೆ

ಕಾರ್ಖಾನೆ ಸ್ಥಾಪನೆಗೆ ಬೆಂಗಳೂರು ವಿಮಾನ ನಿಲ್ದಾಣದ ಬಳಿ ಭೂಮಿಯ ಅಗತ್ಯವಿದೆ ಎಂಬ ಲೆನ್ಸ್‌ಕಾರ್ಟ್ ಸಮೂಹದ ಮನವಿಗೆ ಕೈಗಾರಿಕಾ ಸಚಿವ ಎಂ. ಬಿ ಪಾಟೀಲ್ ಅವರು ಕೆಲವೇ ನಿಮಿಷಗಳಲ್ಲಿ ಸ್ಪಂದನೆ ನೀಡಿ, ಹಲವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಎಂಬಿ ಪಾಟೀಲ್
ಎಂಬಿ ಪಾಟೀಲ್

ಬೆಂಗಳೂರು: ಕಾರ್ಖಾನೆ ಸ್ಥಾಪನೆಗೆ ಬೆಂಗಳೂರು ವಿಮಾನ ನಿಲ್ದಾಣದ ಬಳಿ ಭೂಮಿಯ ಅಗತ್ಯವಿದೆ ಎಂಬ ಲೆನ್ಸ್‌ಕಾರ್ಟ್ ಸಮೂಹದ ಮನವಿಗೆ ಕೈಗಾರಿಕಾ ಸಚಿವ ಎಂ. ಬಿ ಪಾಟೀಲ್ ಅವರು ಕೆಲವೇ ನಿಮಿಷಗಳಲ್ಲಿ ಸ್ಪಂದನೆ ನೀಡಿ, ಹಲವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಲೆನ್ಸ್ ಕಾರ್ಟ್ ಉನ್ನತಾಧಿಕಾರಿ ಪಿಯೂಷ್ ಬನ್ಸಾಲ್ ಅವರು 'ಎಕ್ಸ್'ನಲ್ಲಿ ತಮ್ಮ ಅಗತ್ಯದ ಬಗ್ಗೆ ಒಂದು ಪೋಸ್ಟ್ ಹಾಕಿದ್ದರುಯಾವುದಾದರೂ ಉದ್ಯಮ ಸಂಸ್ಥೆಗೆ ಜಮೀನು ಮಾರಾಟ ಮಾಡಲು ಆಸಕ್ತಿ ಇದ್ದರೆ ತಮಗೆ ಇ-ಮೇಲ್ ಕಳಿಸುವಂತೆ ಕೋರಿದ್ದರು.

ಇದನ್ನು ಗಮನಿಸಿದ ಸಚಿವರು ಕೂಡಲೇ ಕಾರ್ಯಪ್ರವೃತ್ತರಾಗಿ, 'ಕೈಗಾರಿಕಾ ಇಲಾಖೆಯು ನಿಮ್ಮ ಬೆಂಬಲಕ್ಕಿದ್ದು, ನಿಮ್ಮ ಅಗತ್ಯಗಳನ್ನೆಲ್ಲ ಪೂರೈಸಲಿದೆ. ನಮ್ಮ ಅಧಿಕಾರಿಗಳು ತಕ್ಷಣವೇ ನಿಮ್ಮನ್ನು ಸಂಪರ್ಕಿಸಲಿದ್ದಾರೆ. ನೀವು ಇರಬೇಕಾದ ಜಾಗ ಕರ್ನಾಟಕ 'ಎಂದು ಮರುಪೋಸ್ಟ್ ಮಾಡಿ, ಭರವಸೆ ನೀಡಿದ್ದಾರೆ. ಜೊತೆಗೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ಕೂಡ ನೀಡಿದ್ದಾರೆಂದು ತಿಳಿದುಬಂದಿದೆ. ಸಚಿವರ ಈ ನಡೆಗೆ ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com