ಬೆಂಗಳೂರು: ಮಿನಿ ಸಾರಿಗೆ ವಾಹನಕ್ಕೆ ಬೈಕ್ ಡಿಕ್ಕಿ; ಮೂವರು ಯುವಕರು ಸ್ಥಳದಲ್ಲೇ ಸಾವು

ಬೆಂಗಳೂರು ನಗರದ ರಾಜಗೋಪಾಲನಗರದಲ್ಲಿ ಮಿನಿ ಸಾರಿಗೆ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಬುಧವಾರ ನಡೆದಿದೆ. ಅಪಘಾತದ ಬಳಿಕ ಟ್ರಾನ್ಸ್‌ಪೋರ್ಟ್ ವಾಹನದ ಚಾಲಕ ವಾಹನವನ್ನು ಅಲ್ಲೇ ಬಿಟ್ಟು, ಸ್ಥಳದಿಂದ ಪರಾರಿಯಾಗಿದ್ದಾನೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on

ಬೆಂಗಳೂರು: ನಗರದ ರಾಜಗೋಪಾಲನಗರದಲ್ಲಿ ಮಿನಿ ಸಾರಿಗೆ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಬುಧವಾರ ನಡೆದಿದೆ.

ಪೊಲೀಸರ ಪ್ರಕಾರ, ಯುವಕರು ಮಂಗಳವಾರ ರಾತ್ರಿ ಈದ್ ಆಚರಣೆಗಾಗಿ ಬಟ್ಟೆ ಮತ್ತು ಇತರ ವಸ್ತುಗಳನ್ನು ಖರೀದಿಸಲು ಹತ್ತಿರದ ಮಾರುಕಟ್ಟೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ವೇಳೆ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಅಪಘಾತದ ಬಳಿಕ ಟ್ರಾನ್ಸ್‌ಪೋರ್ಟ್ ವಾಹನದ ಚಾಲಕ ವಾಹನವನ್ನು ಅಲ್ಲೇ ಬಿಟ್ಟು, ಸ್ಥಳದಿಂದ ಪರಾರಿಯಾಗಿದ್ದಾನೆ.

ಪ್ರಾತಿನಿಧಿಕ ಚಿತ್ರ
ರಸ್ತೆ ಅಪಘಾತ ಹೆಚ್ಚಳ: ಬೆಂಗಳೂರಿನಲ್ಲಿ ಪ್ರತಿದಿನ ಇಬ್ಬರು ಸಾವು- ಎಡಿಜಿಪಿ ಅಲೋಕ್ ಕುಮಾರ್

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com