ಕೋಲಾರ: ಕ್ವಾರಿಯಲ್ಲಿ ಮುಳುಗುತ್ತಿದ್ದ ತಮ್ಮನನ್ನು ರಕ್ಷಿಸಲು ಹೋಗಿ ಅಣ್ಣನೂ ಸಾವು

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಲ್ಯಪ್ಪನಹಳ್ಳಿಯ ಕ್ವಾರಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಸಹೋದರರು ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.
ಇಬ್ಬರು ಸಹೋದರರು
ಇಬ್ಬರು ಸಹೋದರರು
Updated on

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಲ್ಯಪ್ಪನಹಳ್ಳಿಯ ಕ್ವಾರಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಸಹೋದರರು ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

ಮೃತ ಸಹೋದರರನ್ನು ಪವನ್ ​ಕುಮಾರ್(18)​ ಮತ್ತು ಮಧು ಕುಮಾರ್​()14 ಎಂದು ಗುರುತಿಸಲಾಗಿದೆ. ಬೇಸಿಗೆ ಬಿಸಿ ತಾಳಲಾರದೆ ಯುವಕರ ಜತೆ ಈಜಲು ಹೋಗಿದ್ದ ಈ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.

ಮುಳುಗುತ್ತಿದ್ದ ತನ್ನ ತಮ್ಮ ಮಧು ಕುಮಾರ್ ನನ್ನು ರಕ್ಷಿಸಲು ಹೋಗಿ ಅಣ್ಣ ಪವನ್ ಕುಮಾರ್ ಸಹ ನೀರು ಪಾಲಾಗಿದ್ದಾನೆ.

ಇಬ್ಬರು ಸಹೋದರರು
ವಿಜಯಪುರ: ಕೃಷ್ಣಾನದಿಯಲ್ಲಿ ದೇವರ ಪಲ್ಲಕ್ಕಿ ತೊಳೆಯಲು ತೆರಳಿದ್ದ ಇಬ್ಬರು ಸಹೋದರರು ನೀರುಪಾಲು

ಈ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com