ಸಂಗ್ರಹ ಚಿತ್ರ
ರಾಜ್ಯ
ದಾವಣಗೆರೆ: ಓಮಿನಿಗೆ KSRTC ಬಸ್ ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು
ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಓಮಿನಿ ವ್ಯಾನ್ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ಘಟನೆ ನಡೆದಿದೆ.
ದಾವಣೆಗೆರೆ: ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಓಮಿನಿ ವ್ಯಾನ್ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ಘಟನೆ ನಡೆದಿದೆ.
ಮೃತರನ್ನು ಸೂರಗೊಂಡನಕೊಪ್ಪ ನಿವಾಸಿಗಳಾದ 30 ವರ್ಷದ ರಾಕೇಶ್, 27 ವರ್ಷದ ದೇವರಾಜ್ ಹಾಗೂ ಹರಮಘಟ್ಟ ಗ್ರಾಮದ ನಿವಾಸಿ 83 ವರ್ಷದ ನಂಜುಂಡಪ್ಪ ಎಂದು ತಿಳಿದುಬಂದಿದೆ.
ಭೀಕರ ಅಪಘಾತದಲ್ಲಿ ಓಮಿನಿಯಲ್ಲಿದ್ದ ಆರಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಈ ಪೈಕಿ ತೀವ್ರವಾಗಿ ಗಾಯಗೊಂಡಿರುವ ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ