ದಾವಣಗೆರೆ: ಓಮಿನಿಗೆ KSRTC ಬಸ್​ ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು

ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದು ಓಮಿನಿ ವ್ಯಾನ್​ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ಘಟನೆ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ದಾವಣೆಗೆರೆ: ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದು ಓಮಿನಿ ವ್ಯಾನ್​ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ಘಟನೆ ನಡೆದಿದೆ.

ಮೃತರನ್ನು ಸೂರಗೊಂಡನಕೊಪ್ಪ ನಿವಾಸಿಗಳಾದ 30 ವರ್ಷದ ರಾಕೇಶ್, 27 ವರ್ಷದ ದೇವರಾಜ್ ಹಾಗೂ ಹರಮಘಟ್ಟ ಗ್ರಾಮದ ನಿವಾಸಿ 83 ವರ್ಷದ ನಂಜುಂಡಪ್ಪ ಎಂದು ತಿಳಿದುಬಂದಿದೆ.

ಸಂಗ್ರಹ ಚಿತ್ರ
ಬೆಂಗಳೂರು: 'ಕುಡಿಯಬೇಡಿ' ಎಂದಿದ್ದಕ್ಕೆ ವ್ಯಕ್ತಿಯನ್ನು ಇರಿದು ಕೊಂದ ಯುವಕರು!

ಭೀಕರ ಅಪಘಾತದಲ್ಲಿ ಓಮಿನಿಯಲ್ಲಿದ್ದ ಆರಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಈ ಪೈಕಿ ತೀವ್ರವಾಗಿ ಗಾಯಗೊಂಡಿರುವ ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com