ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರಾಗಿ ಡಾ. ಶ್ಯಾಮ್‌ ಭಟ್‌ ನೇಮಕ

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ (ಎಸ್‌ಎಚ್‌ಆರ್‌ಸಿ) ಹಂಗಾಮಿ ಅಧ್ಯಕ್ಷರನ್ನಾಗಿ ಆಡಳಿತಾತ್ಮಕ ಸದಸ್ಯರಾಗಿರುವ ನಿವೃತ್ತ ಐಎಎಸ್‌ ಅಧಿಕಾರಿ ಡಾ. ಟಿ ಶ್ಯಾಮ್ ಭಟ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರಾಗಿ ಡಾ. ಶ್ಯಾಮ್‌ ಭಟ್‌ ನೇಮಕ
Updated on

ಬೆಂಗಳೂರು: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ (ಎಸ್‌ಎಚ್‌ಆರ್‌ಸಿ) ಹಂಗಾಮಿ ಅಧ್ಯಕ್ಷರನ್ನಾಗಿ ಆಡಳಿತಾತ್ಮಕ ಸದಸ್ಯರಾಗಿರುವ ನಿವೃತ್ತ ಐಎಎಸ್‌ ಅಧಿಕಾರಿ ಡಾ. ಟಿ ಶ್ಯಾಮ್ ಭಟ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಮಾನವ ಹಕ್ಕುಗಳ ರಕ್ಷಣಾ ಕಾಯಿದೆ ಸೆಕ್ಷನ್‌ 25ರ ಉಪ ಸೆಕ್ಷನ್‌ (1)ರ ಅಡಿ ರಾಜ್ಯಪಾಲರು ಡಾ. ಟಿ ಶ್ಯಾಮ್‌ ಭಟ್‌ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ನೂತನ ಅಧ್ಯಕ್ಷರನ್ನು ನೇಮಕ ಮಾಡುವವರೆಗೆ ಅಥವಾ ಮುಂದಿನ ಆದೇಶದವರೆಗೆ ಭಟ್‌ ಅಧ್ಯಕ್ಷ ಹುದ್ದೆಯಲ್ಲಿರಲಿದ್ದಾರೆ ಎಂದು ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಿಎಸ್‌ ಸಂಗ್ರೇಶಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರಾಗಿ ಡಾ. ಶ್ಯಾಮ್‌ ಭಟ್‌ ನೇಮಕ
ಮಾನವ ಹಕ್ಕುಗಳ ಆಯೋಗ ನಿರ್ವಹಿಸದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಎಸ್‌ಎಚ್‌ಆರ್‌ಸಿ ಅಧ್ಯಕ್ಷರಾಗಿ ನೇಮಕಗೊಂಡಿದ್ದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಲ್ ನಾರಾಯಣಸ್ವಾಮಿ ಅವರನ್ನು ಲೋಕಪಾಲದ ನ್ಯಾಯಾಂಗ ಸದಸ್ಯರನ್ನಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಅವರು ಈ ಹುದ್ದೆ ತೊರೆದಿದ್ದರು. ಇದರಿಂದ ಎಸ್‌ಎಚ್‌ಆರ್‌ಸಿ ಅಧ್ಯಕ್ಷ ಹುದ್ದೆ ಖಾಲಿಯಿತ್ತು. ಇದಕ್ಕೆ ಈಗ ಶ್ಯಾಮ್‌ ಭಟ್‌ ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com