ಕಲಬುರಗಿ: ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

ಸಂವಿಧಾನ ಶಿಲ್ಪಿ ಡಾ.ಬಿ. ಆರ್. ಅಂಬೇಡ್ಕರ್ ಜಯಂತಿಯ ಮೆರವಣಿಗೆ ವೇಳೆಯಲ್ಲಿ ಯುವಕನಿಗೆ ಚಾಕುವಿನಿಂದ ಕೊಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ. ಆರ್. ಅಂಬೇಡ್ಕರ್ ಜಯಂತಿಯ ಮೆರವಣಿಗೆ ವೇಳೆಯಲ್ಲಿ ಯುವಕನಿಗೆ ಚಾಕುವಿನಿಂದ ಕೊಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಅಶೋಕನಗರದ ನಿವಾಸಿ ಆಕಾಶ್ ಅಂಜನೇಯ (26) ಹತ್ಯೆಗೀಡಾದ ಯುವಕ. ಆತನ ಸ್ನೇಹಿತ ನವೀನ್ ಎಂಬಾತ ಕೊಲೆ ಮಾಡಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ರಾತ್ರಿ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ವೇಳೆ ರಾಷ್ಟ್ರಪತಿ ಚೌಕ್ ನಲ್ಲಿ ಆಕಾಶ್ ಡ್ಯಾನ್ಸ್ ಮಾಡುತ್ತಿದ್ದಾಗ ಹಿಂದುಗಡೆಯಿಂದ ಬಂದ ನವೀನ್, ಆತನ ಬೆನ್ನಿಗೆ ಚೂರಿ ಹಾಕಿ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದಿದ್ದ ಆಕಾಶ್ ನನ್ನು ಕೆಲವರು ಆಸ್ಪತ್ರೆಗೆ ಕರೆದೊಯ್ದರು ಬದುಕಿ ಉಳಿಯಲಿಲ್ಲ . ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com