ಹುಸಿಯಾದ ನಿರೀಕ್ಷೆ, ಕರುಣೆ ತೋರದ ವರುಣ; ಬೆಂಗಳೂರಿನಲ್ಲಿ ಇನ್ನೂ ಒಂದು ವಾರ ರಣ ಬಿಸಿಲು: IMD

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸತತ ಮೂರ್ನಾಲ್ಕು ದಿನಗಳಿಂದಲೂ ಮಳೆರಾಯ ತಂಪೆರೆದಿದ್ದಾನೆ. ಆದರೆ ರಾಜ್ಯ ರಾಜಧಾನಿ ಬೆಂಗಳೂರಿನ ಮೇಲೆ ಮಾತ್ರ ವರುಣ ಮುನಿಸಿಕೊಂಡಿದ್ದಾನೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸತತ ಮೂರ್ನಾಲ್ಕು ದಿನಗಳಿಂದಲೂ ಮಳೆರಾಯ ತಂಪೆರೆದಿದ್ದಾನೆ. ಆದರೆ ರಾಜ್ಯ ರಾಜಧಾನಿ ಬೆಂಗಳೂರಿನ ಮೇಲೆ ಮಾತ್ರ ಮಳೆರಾಯ ಮುನಿಸಿಕೊಂಡಿದ್ದು, ಇದುವರೆಗೂ ಒಂದು ಹನಿಯೂ ಮಳೆಯಿಲ್ಲದೆ ಇಲ್ಲಿನ ಜನರು ಬಿಸಿಲಿನ ಬೇಗೆಗೆ ಬೆಂದು ಹೋಗಿದ್ದಾರೆ.

ಮಳೆಗಾಗಿ ಕಾಯುತ್ತಿರುವ ಬೆಂಗಳೂರು ಜನರ ನಿರೀಕ್ಷೆ ಮತ್ತೊಮ್ಮೆ ಹುಸಿಯಾಗಿದೆ. ಯುಗಾದಿ ನಂತರದ ಮಳೆಯ ಮುನ್ಸೂಚನೆಯಿಂದ ಉತ್ಸಾಹದಲ್ಲಿದ್ದ ನಗರ ವಾಸಿಗಳು ಮರುಣನ ಕೃಪೆಗಾಗಿ ಇನ್ನೂ ಒಂದು ವಾರ ಕಾಯಬೇಕಾಗಿದೆ, ಭಾರತೀಯ ಹವಾಮಾನ ಇಲಾಖೆ (IMD) ಸುಮಾರು ಒಂದು ವಾರದವರೆಗೆ ಮಳೆಯ ಸಾಧ್ಯತೆಯನ್ನು ಮುಂದೂಡಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ತುಂತುರು ಮಳೆಯಾಗಿದೆ.

ಇನ್ನೂ ಬೆಂಗಳೂರಿನಲ್ಲಿ ಮುಂದಿನ 5 ದಿನಗಳ ಕಾಲ ಬಿಸಿಲಿನ ವಾತಾವರಣ ಮುಂದುವರೆಯಲಿದ್ದು, ಏಪ್ರಿಲ್‌ 19ರ ಬಳಿಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬಿಸಿಲಿನ ಬೇಗೆಗೆ ಬೆಂದು ಬೇಸತ್ತು ಹೋಗಿರುವ ನಗರದ ಜನರು ಮಳೆಗಾಗಿ ಪರಿತಪಿಸುತ್ತಿದ್ದಾರೆ.

ಸಾಂದರ್ಭಿಕ ಚಿತ್ರ
Rain in Karnataka: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ, ವಿಜಯಪುರದಲ್ಲಿ ಮಹಿಳೆ ಸಾವು

ಏಪ್ರಿಲ್‌ನಲ್ಲಿ ತಾಪಮಾನವು ಹೆಚ್ಚಾಗುವ ನಿರೀಕ್ಷೆಯಿಲ್ಲದಿದ್ದರೂ, ಯಾವುದೇ ಬೇರೆ ಪರಿಹಾರವಿಲ್ಲ ತಾಪಮಾನವು 35-36 ಡಿಗ್ರಿ ಸೆಲ್ಸಿಯಸ್‌ನಲ್ಲಿ ಇರುತ್ತದೆ ಎಂದು IMD ಯ ಹಿರಿಯ ವಿಜ್ಞಾನಿ ಎ ಪ್ರಸಾದ್ ಅವರು ವಿವರಿಸಿದರು,

ಈ ಹಿಂದೆ, ಏಪ್ರಿಲ್‌ನಲ್ಲಿ ಬೆಂಗಳೂರಿಗೆ 61.7 ಮಿಮೀ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿತ್ತು. ಆದಾಗ್ಯೂ, ಮಳೆಯು ಕೆಲವು ದಿನಗಳ ಕಾಲ ವಿಳಂಬವಾಗಿದೆ ಎಂದು ವರದಿಯಾಗಿದೆ, ನಗರದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ.

ಏಪ್ರಿಲ್ 14 ರಂದು, ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಸುಮಾರು ಮೂರು ಡಿಗ್ರಿಗಳಷ್ಟು ಕುಸಿತವಾಗಿದೆ. ಇನ್ನೂ, ಗರಿಷ್ಠ ತಾಪಮಾನವು 34 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿದೆ, ಇದು ಏಪ್ರಿಲ್‌ನಲ್ಲಿ ಬೆಂಗಳೂರಿನ ಸಾಮಾನ್ಯ ಸರಾಸರಿಯಾಗಿದೆ. IMD ವೆಬ್‌ಸೈಟ್ ಪ್ರಕಾರ, ಏಪ್ರಿಲ್ 15 ಮತ್ತು 16 ರಂದು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 22 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com