ಮಲ್ಲಿಪ್ಪಾಡಿ: ಮಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 7 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಬಂಟ್ವಾಳದ ಮಲ್ಲಿಪ್ಪಾಡಿಯಲ್ಲಿ ಈ ಘಟನೆ ನಡೆದಿದೆ.
ಗಾಯಗೊಂಡವರನ್ನು ತಕ್ಷಣವೇ ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡವರನ್ನು ತಕ್ಷಣವೇ ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಥಮ ಚಿಕಿತ್ಸೆ ಪಡೆದ ನಂತರ ಓರ್ವ ವ್ಯಕ್ತಿ ಪುತ್ತೂರಿನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮಲ್ಲಿಪ್ಪಾಡಿ ಮೂಲಕ ಹಾದುಹೋಗುವ ಟ್ರೆಂಚ್ ಬಳಿ ಕುಸಿತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಗಳು ಸೂಚಿಸಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾರ್ಮಿಕರು ಡಬಲ್ ಸೆಂಟ್ರಿಂಗ್ ವಿಧಾನವನ್ನು ಬಳಸಿಕೊಂಡು ಸ್ಲ್ಯಾಬ್ ಕೆಲಸದಲ್ಲಿ ತೊಡಗಿದ್ದಾಗ ಕುಸಿತ ಸಂಭವಿಸಿದೆ. ಮೇಲಿನಿಂದ ಕಾಂಕ್ರೀಟ್ ಮಿಶ್ರಣವನ್ನು ಸುರಿಯುವುದರಿಂದ ಕೆಳಭಾಗದ ಸೆಂಟ್ರಿಂಗ್ ರಾಡ್ನ ಸಡಿಲಗೊಂಡಿದ್ದು ಮೇಲಿನ ಭಾಗದ ಕುಸಿತಕ್ಕೆ ಕಾರಣವಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ನಿರ್ಮಾಣ ಸ್ಥಳದಲ್ಲಿ ಮೇಲ್ವಿಚಾರಕರ ಅನುಪಸ್ಥಿತಿಯು ದುರ್ಘಟನೆಗೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ. ಕಾಮಗಾರಿಯ ಯೋಜನೆ ಮತ್ತು ಅನುಷ್ಠಾನದಲ್ಲಿ ನಿರ್ಲಕ್ಷ್ಯವೇ ಘಟನೆಗೆ ಪ್ರಾಥಮಿಕ ಕಾರಣ ಎಂದು ತಜ್ಞರು ಹೇಳಿದ್ದಾರೆ.
Advertisement