ಬೆಂಗಳೂರು: ರೈಲಿಗೆ ಸಿಲುಕಿ ಖಾಸಗಿ ಆಸ್ಪತ್ರೆ ಶುಶ್ರೂಷಕ ಆತ್ಮಹತ್ಯೆಗೆ ಶರಣು

ಖಾಸಗಿ ಆಸ್ಪತ್ರೆಯ ಶುಶ್ರೂಷಕನೊಬ್ಬ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೀಪಾಂಜಲಿ ನಗರದ ಸಮೀಪ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಖಾಸಗಿ ಆಸ್ಪತ್ರೆಯ ಶುಶ್ರೂಷಕನೊಬ್ಬ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೀಪಾಂಜಲಿ ನಗರದ ಸಮೀಪ ನಡೆದಿದೆ.

ಮಾಗಡಿ ರಸ್ತೆಯ ಚೋಳರಪಾಳ್ಯದ ನಿವಾಸಿ ಚನ್ನಬಸು ಅಶೋಕ್ (22) ಮೃತ ದುರ್ದೈವಿ. ದೀಪಾಂಜಲಿ ನಗರದ ಸಮೀಪ ರೈಲಿಗೆ ಬುಧವಾರ ರಾತ್ರಿ ಸಿಲುಕಿ ಚನ್ನಬಸು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂಗ್ರಹ ಚಿತ್ರ
ಬೆಂಗಳೂರು: 3 ತಿಂಗಳ ಹಿಂದೆ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ರೈಲ್ವೇ ಹಳಿಗಳ ಬಳಿ ಅಪರಿಚಿತ ಮೃತದೇಹ ಕಂಡು ಪೊಲೀಸರಿಗೆ ಸಾರ್ವಜನಿಕರು ಗುರುವಾರ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದಾಗ ಮೃತದೇಹದ ಗುರುತು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆ ಕಾರಜೋಳದ ಮೃತ ಅಶೋಕ್, ಕಳೆದ 15 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಶುಶ್ರೂಷಕನಾಗಿ ಕೆಲಸ ಮಾಡುತ್ತಿದ್ದ. ತಮ್ಮ ಚಿಕ್ಕಮ್ಮನ ಮನೆಯಲ್ಲಿ ನೆಲೆಸಿದ್ದ ಈತ, ಬುಧವಾರ ರಾತ್ರಿ ಕೆಲಸ ಮುಗಿಸಿ ಮರಳುವಾಗ ದೀಪಾಂಜಲಿನಗರದ ಬಳಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com