ಮೈಸೂರು: ಪ್ರಧಾನಿ ಮೋದಿ ಪರ ಹಾಡು ಬರೆದಿದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.
ರೋಹಿತ್ ಮೇಲೆ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಹಲ್ಲೆ ನಡೆಸಿದ್ದ ಗುಂಪು ನರೇಂದ್ರ ಮೋದಿ ಕುರಿತು ಹಾಡು ಮಾಡಿದ್ದೀಯಾ, ನಿನ್ನ ಸಾಯಿಸುತ್ತೇವೆಂದು ಬೆದರಿಕೆ ಹಾಕಿದ್ದಲ್ಲದೆ, ಪಾಕಿಸ್ತಾನ ಹಾಗೇ ಅಲ್ಲಾಹು ಅಕ್ಬರ್ ಘೋಷಣೆ ಕೂಗುವಂತೆ ಒತ್ತಾಯಿಸಿದರು ಎಂದು ರೋಹಿತ್ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.
ಈ ಘಟನೆ ಸಂಬಂಧ ರೋಹಿತ್ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾನೆ. ಈ ವಿಡಿಯೋವನ್ನು ಟ್ವೀಟ್ ಮಾಡಿರುವ ಬಿಜೆಪಿ ಘಟನೆ ಕುರಿತಂತೆ ಕಿಡಿಕಾರಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದೆ.
ರೋಹಿತ್ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಮೈಸೂರಿನ ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಆರೋಪಿಗಳ ಬಂಧನಕ್ಕೆ ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ.
Advertisement