ಸತ್ಯ ಮುಚ್ಚಿಡಲು ಸಾಧ್ಯವಿಲ್ಲ, ಹೇಳಿಕೆಯಿಂದ ನೇಹಾ ಪೋಷಕರಿಗೆ ಬೇಸರವಾಗಿದ್ದರೆ ವಿಷಾದವಿರಲಿ: ಗೃಹ ಸಚಿವ

ಸತ್ಯ ಮುಚ್ಚಿಡಲು ಸಾಧ್ಯವಿಲ್ಲ. ಆದರೆ, ನನ್ನ ಹೇಳಿಕೆಯಿಂದ ನೇಹಾ ಪೋಷಕರಿಗೆ ಬೇಸರವಾಗಿದ್ದರೆ ವಿಷಾದವಿರಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಗೃಹ ಸಚಿವ ಪರಮೇಶ್ವರ್
ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಸತ್ಯ ಮುಚ್ಚಿಡಲು ಸಾಧ್ಯವಿಲ್ಲ. ಆದರೆ, ನನ್ನ ಹೇಳಿಕೆಯಿಂದ ನೇಹಾ ಪೋಷಕರಿಗೆ ಬೇಸರವಾಗಿದ್ದರೆ ವಿಷಾದವಿರಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ ಹೇಳಿಕೆಯಿಂದ ಅವರ ಪೋಷಕರಿಗೆ ಬೇಸರವಾಗಿದ್ದರೆ ವಿಷಾದವಿರಲಿ. ಆದರೆ, ಸತ್ಯವನ್ನು ಯಾವತ್ತೂ ಮುಚ್ಚಿಡಲು ಸಾಧ್ಯವಿಲ್ಲ. ತನಿಖೆ ಬಳಿಕ ಎಲ್ಲಾ ವಿಷಯ ಹೊರಬರುತ್ತೆ. ನಮಗೆ ಬಂದಿರುವ ವರದಿ ಪ್ರಕಾರ ಮಾತಾಡಿದ್ದೇವೆ ಎಂದು ಹೇಳಿದರು.

ಗೃಹ ಸಚಿವ ಪರಮೇಶ್ವರ್
ನೇಹಾ ಹತ್ಯೆ: ದೇಶದ ಮುಂದೆ ತಲೆ ತಗ್ಗಿಸುವ ಕೆಲಸ ಮಾಡಿದ್ದಾನೆ: ಸುಮ್ಮನೆ ಬಿಡಬೇಡಿ, ಆರೋಪಿ ತಂದೆ ಕಣ್ಣೀರು

ಎಬಿವಿಪಿ ಕಾರ್ಯಕರ್ತರ ಮುತ್ತಿಗೆ ವಿಚಾರವಾಗಿ ಮಾತನಾಡಿ, ಅವರಿಗೆ ಸತ್ಯಾಸತ್ಯತೆ ಗೊತ್ತಿಲ್ಲ. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ನಮಗೆ ಜವಾಬ್ದಾರಿ ಇದೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು. ತನಿಖೆಯಲ್ಲಿ ಎಲ್ಲಾ ಸತ್ಯ ಹೊರಬರಲಿದೆ ಎಂದು ತಿಳಿಸಿದರು.

ರಾಜ್ಯಕ್ಕೆ ಮೋದಿ ಭೇಟಿ ಕುರಿತು ಮಾತನಾಡಿ, ಮೋದಿ ಅವರು ಕರ್ನಾಟಕಕ್ಕೆ ಬಂದು ಹೋಗಿದ್ದಾರೆ. ಮುಂದೇನು ಕೂಡ ಬರುತ್ತಾರೆ. ನಾವು ಅನೇಕ ಪ್ರಶ್ನೆ ಕೇಳಿದ್ಧೇವೆ. ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದೀರಾ ಎಂದು ಕೇಳಿದ್ದೇವೆ. ಜಿಎಸ್ ಟಿ ಹಂಚಿಕೆ ಎಷ್ಟು ಕೊಟ್ಟಿದ್ದೀರಿ? ಭೀಕರ ಬರಗಾಲ ಇತ್ತು, ವಿಶೇಷ ಅನುದಾನ ಕೊಟ್ಟಿಲ್ಲ. 18 ಸಾವಿರ ಕೋಟಿ ಬರ ಪರಿಹಾರ ಪ್ರಸ್ತಾವನೆ ಇಡಲಾಗಿತ್ತು, ಅದನ್ನು ಕೊಟ್ಟಿಲ್ಲ. ಯಾವುದೇ ಹೊಸ ಯೋಜನೆ ಕೊಟ್ಟಿಲ್ಲ. ಭದ್ರ ಮೇಲ್ಡಂಡೆ ಯೋಜನೆಗೆ ಯಾವುದೇ ಸಹಕಾರ ಕೊಟ್ಟಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com