ಬೆಳಗಾವಿ: ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಚಾಲಕನಿಗೆ ಹಿಂದೂ ಕಾರ್ಯಕರ್ತರಿಂದ ಹಿಗ್ಗಾಮುಗ್ಗ ಥಳಿತ!

ಬೆಳಗಾವಿಯ ಸುವರ್ಣಸೌಧದ ಮುಂಭಾಗದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿ ಚಾಲಕನಿಗೆ 50ಕ್ಕೂ ಹೆಚ್ಚು ಹಿಂದೂಪರ ಕಾರ್ಯಕರ್ತರು ಥಳಿಸಿದ್ದಾರೆ.
ಅಕ್ರಮವಾಗಿ ಗೋವು ಸಾಗಾಟ
ಅಕ್ರಮವಾಗಿ ಗೋವು ಸಾಗಾಟ
Updated on

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಮುಂಭಾಗದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿ ಚಾಲಕನಿಗೆ 50ಕ್ಕೂ ಹೆಚ್ಚು ಹಿಂದೂಪರ ಕಾರ್ಯಕರ್ತರು ಥಳಿಸಿದ್ದಾರೆ.

ಮಹಾರಾಷ್ಟ್ರದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಲಾರಿಯನ್ನು ಹೆದ್ದಾರಿಯಲ್ಲಿ ತಡೆದ ಹಿಂದೂ ಕಾರ್ಯಕರ್ತರು ಚಾಲಕನನ್ನು ಲಾರಿಯಿಂದ ಹೊರಗೆಳೆದು ತೀವ್ರವಾಗಿ ಥಳಿಸಿದ್ದಾರೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಕಾಸರಗೋಡು ಮೂಲದ ಲಾರಿ ಚಾಲಕ ಉಮರ್ ಮೋಯಿದ್ದೀನ್ ನನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಡಿಸಿಪಿ ರೋಹನ್ ಜಗದೀಶ್ ಪರಿಶೀಲನೆ ನಡೆಸಿದ್ದು ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳುತ್ತೇವೆ. ಸಂಜೆ ಗೋವುಗಳನ್ನು ಸಾಗಿಸುತ್ತಿದ್ದ ವಾಹನ ತಡೆದ ಹಿಂದೂ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಚಾಲಕ ಹಾಗೂ ಕ್ಲೀನರ್ ಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರೋಹನ್ ಜಗದೀಶ್ ಹೇಳಿದ್ದಾರೆ.

ಅಕ್ರಮವಾಗಿ ಗೋವು ಸಾಗಾಟ
ಡ್ರಗ್ಸ್ ಪ್ರಕರಣ: ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಮೂವರು ಆರೋಪಿಗಳ ಬಂಧನ

ಅಕ್ರಮವಾಗಿ ಗೋವು ಸಾಗಿಸುತ್ತಿದ್ದರೆ ಅವರ ವಿರುದ್ಧ ಪ್ರಕರಣ ದಾಖಲಾಗಿಸಲಾಗುತ್ತದೆ. ಹಲ್ಲೆ ಮಾಡಿದವರ ಮೇಲೆಯೂ ಕೇಸ್ ದಾಖಲಿಸಿ ತನಿಖೆ ಮಾಡುತ್ತೇವೆ ಎಂದು ರೋಹನ್ ಜಗದೀಶ್ ತಿಳಿಸಿದ್ದಾರೆ. ಸದ್ಯ ಲಾರಿಯಲ್ಲಿದ್ದ 28 ಗೋವುಗಳನ್ನು ಕಮಕಾರಟ್ಟಿಯಲ್ಲಿರುವ ಮಹಾವೀರ ಗೋ ಶಾಲೆಗೆ ಶಿಫ್ಟ್ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com