ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಸಾಮಾಜಿಕ ಜಾಲತಾಣದ ಪ್ರಭಾವಿಗಳಿಗೆ ಹಣ ನೀಡಿದ್ದಾರೆ ಎಂಬ ಆರೋಪದ ಮೇಲೆ ಕೆಪಿಸಿಸಿ ಬಿಜೆಪಿಯ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
Updated on

ಬೆಂಗಳೂರು: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಸಾಮಾಜಿಕ ಜಾಲತಾಣದ ಪ್ರಭಾವಿಗಳಿಗೆ ಹಣ ನೀಡಿದ್ದಾರೆ ಎಂಬ ಆರೋಪದ ಮೇಲೆ ಕೆಪಿಸಿಸಿ ಬಿಜೆಪಿಯ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಶನಿವಾರ ಪತ್ರ ಬರೆದಿರುವ ಕೆಪಿಸಿಸಿ, ಒಡೆಯರ್ ಅವರು ಎಂಸಿಸಿಯನ್ನು ಉಲ್ಲಂಘಿಸಿದ್ದಾರೆ. ಇದು ಚುನಾವಣಾ ಪ್ರಕ್ರಿಯೆಯ ನ್ಯಾಯಸಮ್ಮತತೆ ಮತ್ತು ಪಾರದರ್ಶಕತೆಗೆ ತೀವ್ರ ಅಪಾಯವನ್ನುಂಟುಮಾಡುತ್ತದೆ ಎಂದು ಆರೋಪಿಸಿದೆ.

ಒಡೆಯರ್ ಅವರು ಬೆಂಬಲ ಕೋರುವ ಸ್ಪಷ್ಟ ಉದ್ದೇಶದಿಂದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಕ್ರಿಯವಾಗಿರುವ ಹಲವಾರು ಪ್ರಭಾವಿ ವ್ಯಕ್ತಿಗಳೊಂದಿಗೆ ಸಭೆ ನಡೆಸಿದ್ದಾರೆ. 'ರಹಸ್ಯವಾಗಿ ನಡೆಸಲಾದ ಈ ಸಭೆಯಲ್ಲಿ, ಅವರಿಗೆ ವೈಯಕ್ತಿಕ ನೋಟ್‌ಬುಕ್‌ಗಳು, ಪೆನ್ನುಗಳು, ಚಾಕೊಲೇಟ್‌ಗಳು, ಸೀರೆಗಳು ಮತ್ತು ಸಿಹಿತಿಂಡಿಗಳು ಸೇರಿದಂತೆ ಉಡುಗೊರೆಗಳನ್ನು ನೀಡಲಾಗಿದೆ' ಎಂದು ಅದು ಆರೋಪಿಸಿದೆ.

ಈ ಸಭೆಯ ಅತ್ಯಂತ ಆತಂಕಕಾರಿ ಅಂಶವೆಂದರೆ ಈ ಪ್ರಭಾವಿಗಳಿಗೆ ಅವರ ಬೆಂಬಲ ಮತ್ತು ಅವರ ಉಮೇದುವಾರಿಕೆಯ ಪ್ರಚಾರಕ್ಕಾಗಿ ಗಣನೀಯ ಪ್ರಮಾಣದ ಹಣವನ್ನು ವಿತರಿಸಲಾಗಿದೆ. ಪ್ರಭಾವಿಗಳಿಗೆ ಹಣ ಹಂಚುವ ಈ ಖಂಡನೀಯ ಕ್ರಮವು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ಮೂಲಭೂತ ತತ್ವಗಳನ್ನು ಉಲ್ಲಂಘಿಸುವುದಲ್ಲದೆ, 1951ರ ಪ್ರಜಾ ಪ್ರತಿನಿಧಿ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಘೋರ ಅಪರಾಧವಾಗಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮತ್ತು ಈ ವಿಷಯದ ಬಗ್ಗೆ ಸಂಪೂರ್ಣ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಪ್ರಾರಂಭಿಸಲು ಚುನಾವಣಾ ಸಂಸ್ಥೆಯನ್ನು ಕೆಪಿಸಿಸಿ ಒತ್ತಾಯಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com