ಬೆಂಗಳೂರಿನ ಚಿಕ್ಕಪೇಟೆ ಪೇಪರ್ ತಯಾರಿಕೆ ಘಟಕದಲ್ಲಿ ಅಗ್ನಿ ಅವಘಡ: ವಸ್ತುಗಳು ಬೆಂಕಿಗೆ ಆಹುತಿ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೃದಯ ಭಾಗ ಮೆಜೆಸ್ಟಿಕ್ ಸಮೀಪ ಚಿಕ್ಕಪೇಟೆಯಲ್ಲಿ ಇಂದು ಭಾನುವಾರ ನಸುಕಿನ ಜಾವ ಅಗ್ನಿ ಅವಘಡ ಸಂಭವಿಸಿದ್ದು, ಪೇಪರ್ ವಸ್ತುಗಳ ತಯಾರಿಕಾ ಘಟಕದಲ್ಲಿ ಬೆಂಕಿ ಹತ್ತಿ ಉರಿದು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಚಿಕ್ಕಪೇಟೆಯ ಸೇತುರಾವ್ ರಸ್ತೆಯಲ್ಲಿರುವ ಬಾಲಾಜಿ ಪ್ಲಾಸ್ಟಿಕ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಮೂರನೇ ಮಹಡಿ ಹೊತ್ತಿ ಉರಿದಿದೆ. ಪೇಪರ್ ಪ್ಲೇಟ್, ಪೇಪರ್ ಗ್ಲಾಸ್ ಗಳನ್ನು ತಯಾರಿಸುವ ಘಟಕ ಇದಾಗಿದೆ.

ಸಾಂದರ್ಭಿಕ ಚಿತ್ರ
ಟಿ.ಆರ್.ಮಿಲ್ ಗೋದಾಮಿನಲ್ಲಿ ಅಗ್ನಿ ಅವಘಡ: ಭಾರೀ ಪ್ರಮಾಣದ ಟಯರ್ ಬೆಂಕಿಗಾಹುತಿ

ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com