ಹುಲಿ ದಾಳಿಗೆ ಆನೆ ಮರಿ ಸಾವು: ತಾಯಾನೆ ರೋಧನೆ, ಟ್ರಾಫಿಕ್ ಜಾಮ್

ಹುಲಿ ದಾಳಿಗೆ ಆನೆ ಮರಿಯೊಂದು ನಡು ರಸ್ತೆಯಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರದ ಬಂಡೀಪುರ ಅಭಯಾರಣ್ಯದಲ್ಲಿ ನಡೆದಿದೆ.
ಮರಿಯಾನೆ ಮೃತದೇಹದ ಬಳಿ ರೋಧಿಸುತ್ತಿರುವ ತಾಯಾನೆ.
ಮರಿಯಾನೆ ಮೃತದೇಹದ ಬಳಿ ರೋಧಿಸುತ್ತಿರುವ ತಾಯಾನೆ.
Updated on

ಮೈಸೂರು: ಹುಲಿ ದಾಳಿಗೆ ಆನೆ ಮರಿಯೊಂದು ನಡು ರಸ್ತೆಯಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರದ ಬಂಡೀಪುರ ಅಭಯಾರಣ್ಯದಲ್ಲಿ ನಡೆದಿದೆ.

ಬಂಡೀಪುರ-ಊಟಿ ರಾಷ್ಟ್ರೀಯ ಹೆದ್ದಾರಿ ಬದಿಯ ರಸ್ತೆ ಬದಿಯಲ್ಲಿ ಮರಿಯಾನೆ ಮೇವು ಮೆಯ್ಯುತ್ತಿದ್ದ ಸಂದರ್ಭ ಹುಲಿ ಏಕಾ ಏಕಿ ದಾಳಿ ನಡೆಸಿ ಕೊಂದು ಹಾಕಿದೆ. ಈ ವೇಳೆ ಕೂಗಳತೆ ದೂರಲ್ಲಿದ್ದ ತಾಯಿಯಾನೆ ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಹುಲಿ ಓಡಿ ಹೋಗಿದೆ.

ಮರಿಯಾನೆ ಮೃತದೇಹದ ಬಳಿ ರೋಧಿಸುತ್ತಿರುವ ತಾಯಾನೆ.
ಚಾಮರಾಜನಗರ: ರೈತನ ಮೇಲೆ ಹುಲಿ ದಾಳಿ

ಬಳಿಕ ಸ್ಥಳಕ್ಕೆ ಆಗಮಿಸಿದ ತಾಯಿ ಆನೆ ತನ್ನ ಮರಿಯ ಶವವನ್ನು ಬಿಟ್ಟು ಕದಲದೆ ಕಣ್ಣೀರಾಕುತ್ತಾ ರೋಧಿಸಲು ಆರಂಭಿಸಿದೆ. ಇದರ ಮನಕಲಕುವ ದೃಶ್ಯ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ.

ಮತ್ತೊಂದೆಡೆ ರಸ್ತೆ ಪಕ್ಕದಲ್ಲೇ ಆನೆ ಮರಿ ಸಾವನ್ನಪ್ಪಿರುವ ಹಿನ್ನೆಲೆ ಬಂಡೀಪುರ ಅರಣ್ಯ ವ್ಯಾಪ್ತಿಯ ಮೈಸೂರು ಊಟಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು, ವಾಹನಗಳು ಕಿಲೋಮೀಟರ್ ಗಟ್ಟಲೇ ಸಾಲುಗಟ್ಟಿ ನಿಂತಿ ಭಾರೀ ಸಂಚಾರ ದಟ್ಟಣೆ ಎದುರಾಗಿದ್ದು, ಬಳಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಅರಣ್ಯಾಧಿಕಾರಿಗಳು ಹರಸಾಹಸಪಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com