ನೇಹಾ ಹಿರೇಮಠ್ ಹತ್ಯೆ: ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕು- ಜೆಪಿ ನಡ್ಡಾ

ಗುರುವಾರ ಪ್ರತಿಷ್ಠಿತ ಬಿವಿಬಿ ಕಾಲೇಜ್ ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭಾನುವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ನೇಹಾ ಹಿರೇಮಠ್ ಅವರ ತಂದೆ ಕಾಂಗ್ರೆಸ್ ಕೌನ್ಸಿಲರ್ ನಿರಂಜನ ಹಿರೇಮಠ ಅವರಿಗೆ ಸಾಂತ್ವನ ಹೇಳಿದರು.
ನಿರಂಜನ್ ಹಿರೇಮಠ್ ಅವರಿಗೆ ಸಾಂತ್ವನ ಹೇಳಿದ ಜೆಪಿ ನಡ್ಡಾ
ನಿರಂಜನ್ ಹಿರೇಮಠ್ ಅವರಿಗೆ ಸಾಂತ್ವನ ಹೇಳಿದ ಜೆಪಿ ನಡ್ಡಾ

ಹುಬ್ಬಳ್ಳಿ: ಗುರುವಾರ ಪ್ರತಿಷ್ಠಿತ ಬಿವಿಬಿ ಕಾಲೇಜ್ ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭಾನುವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ನೇಹಾ ಹಿರೇಮಠ್ ಅವರ ತಂದೆ ಕಾಂಗ್ರೆಸ್ ಕೌನ್ಸಿಲರ್ ನಿರಂಜನ ಹಿರೇಮಠ ಅವರಿಗೆ ಸಾಂತ್ವನ ಹೇಳಿದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಪಿ ನಡ್ಡಾ, "ಇದೊಂದು ಆಘಾತಕಾರಿ ಘಟನೆಯಾಗಿದ್ದು, ನಾವು ಖಂಡಿಸುತ್ತೇವೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ ಪರಮೇಶ್ವರ ಅವರ ಹೇಳಿಕೆಗಳು ಆಕ್ಷೇಪಾರ್ಹವಾಗಿವೆ. ಅವರ ಹೇಳಿಕೆಗಳು ತನಿಖೆಯನ್ನು ದುರ್ಬಲಗೊಳಿಸುತ್ತವೆ. ತುಷ್ಟೀಕರಣ ರಾಜಕಾರಣಕ್ಕೆ ಪ್ರಸ್ತುತ ಸರ್ಕಾರವನ್ನು ರಾಜ್ಯದ ಜನರು ಬಿಡುವುದಿಲ್ಲ ಎಂದರು.

ನಿರಂಜನ್ ಹಿರೇಮಠ್ ಅವರಿಗೆ ಸಾಂತ್ವನ ಹೇಳಿದ ಜೆಪಿ ನಡ್ಡಾ
ನೇಹಾ ಹಿರೇಮಠ್ ಹತ್ಯೆ: ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಬಿಜೆಪಿ ಕರೆ

ನಿರಂಜನ್ ಹಿರೇಮಠ್ ಅವರಿಗೆ ರಾಜ್ಯ ಪೊಲೀಸರ ಮೇಲಿನ ನಂಬಿಕೆ ಕಡಿಮೆಯಾಗಿದ್ದು, ರಾಜ್ಯ ಪೊಲೀಸರು ತನಿಖೆ ನಡೆಸಲು ಅಸಮರ್ಥರಾಗಿದ್ದರೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಜೆ.ಪಿ. ನಡ್ಡಾ ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com