ಹುಬ್ಬಳ್ಳಿ: ನೇಹಾ ಹತ್ಯೆ ಖಂಡಿಸಿದ ಮುಸ್ಲಿಮರು; ಸಂತ್ರಸ್ತ ಹಿಂದೂ ಕುಟುಂಬ ಬೆಂಬಲಿಸಿ ಅರ್ಧ ದಿನ ಬಂದ್

ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿ ಮುಸ್ಲಿಂ ಪುರುಷರು ಮತ್ತು ಮಹಿಳೆಯರು ಸೋಮವಾರ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರತಿಭಟನೆ ನಡೆಸಿದರು.
ಅರ್ಧ ದಿನ ಬಂದ್
ಅರ್ಧ ದಿನ ಬಂದ್
Updated on

ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿ ಮುಸ್ಲಿಂ ಪುರುಷರು ಮತ್ತು ಮಹಿಳೆಯರು ಸೋಮವಾರ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರತಿಭಟನೆ ನಡೆಸಿದರು ಮತ್ತು ಸಂತ್ರಸ್ತ ಹಿಂದೂ ಕುಟುಂಬಕ್ಕೆ ಸಾರ್ವಜನಿಕವಾಗಿ ಬೆಂಬಲ ನೀಡಿದರು.

ಹುಬ್ಬಳ್ಳಿ-ಧಾರವಾಡ ಅವಳಿ ನಗರವನ್ನು ಬೆಚ್ಚಿಬೀಳಿಸಿದ ಹೀನ ಕೃತ್ಯವನ್ನು ಖಂಡಿಸಿ ಅರ್ಧ ದಿನ ಬಂದ್ ಆಚರಿಸಿದರು ಮತ್ತು ಹಿರೇಮಠ ಅವರ ಕುಟುಂಬದ ಜೊತೆ ತಾವೂ ಇರುವುದಾಗಿ ಒಗ್ಗಟ್ಟು ಪ್ರದರ್ಶಿಸಿದರು.

‘ನೇಹಾ ಹಿರೇಮಠ್‌ಗೆ ನ್ಯಾಯ ಸಿಗಬೇಕು’ ಎಂದು ಒತ್ತಾಯಿಸಿ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿಗಳ ಮುಂದೆ ಪೋಸ್ಟರ್‌ ಹಾಕಿದ್ದರು.

ಅರ್ಧ ದಿನ ಬಂದ್
Neha Hiremath: ನೇಹಾ ಹಿರೇಮಠ್ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ ಹಸ್ತಾಂತರ, ವಿಶೇಷ ಕೋರ್ಟ್ ಸ್ಥಾಪನೆ- ಸಿಎಂ ಸಿದ್ದರಾಮಯ್ಯ

ಅಂಜುಮನ್-ಎ-ಇಸ್ಲಾಂನ ಧಾರವಾಡ ಘಟಕದ ಬ್ಯಾನರ್ ಅಡಿಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳು, ಬಾಲಕ-ಬಾಲಕಿಯರು ನಗರದಲ್ಲಿ ನೇಹಾ ಹತ್ಯೆ ಖಂಡಿಸಿ ಫಲಕಗಳನ್ನು ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿದರು ಮತ್ತು "ಹೆಣ್ಣುಮಕ್ಕಳನ್ನ ಗೌರವಿಸಬೇಕು ಹಾಗೂ ರಕ್ಷಿಸಬೇಕು" ಎಂದು ಒತ್ತಾಯಿಸಿದರು.

ನೇಹಾ ಹತ್ಯೆ ಪ್ರಕರಣ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದರಿಂದ, ನಗರದಲ್ಲಿ ಮೀಸಲು ಪೊಲೀಸ್ ಪಡೆ ನಿಯೋಜನೆಯೊಂದಿಗೆ ಭಾರಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಕೌನ್ಸಿಲರ್ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ (23) ಅವರನ್ನು ಗುರುವಾರ ಬಿವಿಬಿ ಕಾಲೇಜು ಆವರಣದಲ್ಲಿ ಫಯಾಜ್ ಎಂಬ ಯುವಕ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದನು. ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಫಯಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com