ರಾಯಚೂರು: ಹನುಮ ಜಯಂತಿ ಹಿನ್ನೆಲೆಯಲ್ಲಿ ಇಂದು ಹನುಮ ಪೂಜೆಗಾಗಿ ಕೃಷ್ಣಾ ನದಿಯಿಂದ ನೀರು ತರಲು ಹೊರಟಿದ್ದವರ ಮೇಲೆ ಬೊಲೆರೊ ವಾಹನ ಡಿಕ್ಕಿ ಹೊಡೆದು ಮೂವರು ಮೃತಪಟ್ಟ ಘಟನೆ ರಾಯಚೂರು ತಾಲ್ಲೂಕಿನ ಹೆಗಸನಹಳ್ಳಿ ಬಳಿ ನಡೆದಿದೆ.
ಹೆಗಸನಹಳ್ಳಿ ಗ್ರಾಮದ ಅಯ್ಯನಗೌಡ (28ವ), ಮಹೇಶ್ (24ವ), ಉದಯ್ ಕುಮಾರ್ (28ವ) ಮೃತ ದುರ್ದೈವಿಗಳು. ಭೂಷಣ್ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಹುನುಮ ಜಯಂತಿ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಕ್ಕೆ, ಪಕ್ಕದ ಕೃಷ್ಣಾ ನದಿಯಿಂದ ಬಿಂದಿಗೆಯಲ್ಲಿ ನೀರು ತರಲು ಯುವಕರು ಹೋಗುತ್ತಿದ್ದರು.
ಈ ವೇಳೆ ಕೋಳಿ ಸಾಗಿಸುತ್ತಿದ್ದ ಬೊಲೆರೊ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಸ್ಥಳದಲ್ಲೇ ವಾಹನ ಬಿಟ್ಟು ಚಾಲಕ ಮಧುಸೂದನ್ ಗೌಡ ಪರಾರಿಯಾಗಲು ಯತ್ನಿಸಿದನು. ಬೆನ್ನಟ್ಟಿದ್ದ ಗ್ರಾಮಸ್ಥರು ಚಾಲಕನನ್ನು ಬೆನ್ನಟ್ಟಿ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
Advertisement