BJP ಅಭ್ಯರ್ಥಿ ಡಾ. ಕೆ.ಸುಧಾಕರ್ ಆಪ್ತನ ಮನೆ ಮೇಲೆ ಐಟಿ ದಾಳಿ, ಕೋಟ್ಯಾಂತರ ಹಣ ಪತ್ತೆ!

ಲೋಕಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದ್ದು ಇದಕ್ಕೂ ಮುನ್ನ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆ ಐಟಿ ಶಾಕ್ ನೀಡಿದೆ.
ಐಟಿ ದಾಳಿ
ಐಟಿ ದಾಳಿ
Updated on

ಬೆಂಗಳೂರು: ಲೋಕಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದ್ದು ಇದಕ್ಕೂ ಮುನ್ನ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆ ಐಟಿ ಶಾಕ್ ನೀಡಿದ್ದು ಸುಧಾಕರ್ ಆಪ್ತ ಮಾದಾವರ ಗೋವಿಂದಪ್ಪ ನಿವಾಸದ ಮೇಲೆ ಐಟಿ ದಾಳಿ ನಡೆಸಿದೆ.

ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರೂ ಆಗಿರುವ ಗೋವಿಂದಪ್ಪನವರ ನೆಲಮಂಗಲದ ಮನೆಯಲ್ಲಿ ಹಣ ಇದೆ ಎಂದು ಮಾಹಿತಿ ತಿಳಿಯುತ್ತಿದ್ದಂತೆಯೇ ಐಟಿ ಅಧಿಕಾರಿಗಳು ಇಂದು ದಾಳಿ ಮಾಡಿದ್ದಾರೆ. 10 ಮಂದಿ ಐಟಿ ಅಧಿಕಾರಿಗಳ ತಂಡ ಮನೆಯ ಇಂಚಿಂಚು ಪರಿಶೀಲನೆ ನಡೆಸಿದ್ದು ಕೋಟ್ಯಾಂತರ ರೂಪಾಯಿ ನಗದು ಪತ್ತೆಯಾಗಿದೆ.

ದಾಳಿ ವೇಳೆ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನಾಭರಣೆ ಪತ್ತೆಯಾಗಿದೆ. ನೋಟು ಎಣಿಕೆ ವೇಳೆ ಮನೆಯಲ್ಲಿ ದಾಖಲೆ ಇಲ್ಲದೆ ಬರೋಬ್ಬರಿ 4 ಕೋಟಿ 80 ಲಕ್ಷ ರೂ. ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಐಟಿ ದಾಳಿ
ನನ್ನ ಮಾನಹಾನಿ ಮಾಡಲು ಕಾಂಗ್ರೆಸ್‌ ಕಾರ್ಯಕರ್ತರ ಮನೆಗಳ ಮೇಲೆ ಐಟಿ ದಾಳಿ ನಡೆಯುತ್ತಿವೆ: ಡಿಕೆ ಶಿವಕುಮಾರ್‌

ಗೋವಿಂದಪ್ಪ ನಿವಾಸಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ದೌಡಾಯಿಸಿ ಮಾಹಿತಿ ಪಡೆದುಕೊಂಡರು. ಅಲ್ಲದೆ ಭದ್ರತೆಯನ್ನು ಹೆಚ್ಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com