ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನ: ಪ್ರಾಥಮಿಕ ಚಿಕಿತ್ಸೆ ನೀಡಿ ಜೀವ ಉಳಿಸಿದ ವೈದ್ಯ!

ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನವಾಗಿದ್ದು, ಇದೇ ವೇಳೆ ಮತಹಕ್ಕು ಚಲಾಯಿಸಲು ಬಂದಿದ್ದ ವೈದ್ಯರೊಬ್ಬರು ಆಕೆಯ ಜೀವ ಉಳಿದ ಘಟನೆ ನಗರದ ಜೆ.ಪಿ.ನಗರ 8 ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ನಡೆದಿದೆ.
ಮಹಿಳೆ ಹಾಗೂ ವೈದ್ಯ
ಮಹಿಳೆ ಹಾಗೂ ವೈದ್ಯ
Updated on

ಬೆಂಗಳೂರು: ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನವಾಗಿದ್ದು, ಇದೇ ವೇಳೆ ಮತಹಕ್ಕು ಚಲಾಯಿಸಲು ಬಂದಿದ್ದ ವೈದ್ಯರೊಬ್ಬರು ಆಕೆಯ ಜೀವ ಉಳಿದ ಘಟನೆ ನಗರದ ಜೆ.ಪಿ.ನಗರ 8 ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ನಡೆದಿದೆ.

ಸುಮಾರು ಐವತ್ತರ ಆಸುಪಾಸಿನ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದರು. ಸ್ಥಳದಲ್ಲಿ ಕ್ಯಾನ್ ನಲ್ಲಿದ್ದ ನೀರು ಕುಡಿಯಲು ಮಹಿಳೆ ಹೋಗಿದ್ದು, ಈ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಅದೃಷ್ಟವಶಾತ್ ಇದೇ ಸಂದರ್ಭದಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದ ಡಾ.ಗಣೇಶ್ ಶ್ರೀನಿವಾಸ್ ಪ್ರಸಾದ್ ಎಂಬುವವರು ಮಹಿಳೆಯ ನಾಡಿ ಮಿಡಿತವನ್ನು ಪರಿಶೀಲಿಸಿದ್ದಾರೆ.

ನಾಡಿಮಿಡಿತ ಕಡಿಮೆಯಾಗಿರುವುದು ತಿಳಿದುಬದಿದೆ. ದೇಹ ಕೂಡ ಯಾವುದೇ ಪ್ರತಿಕ್ರಿಯೆಯನ್ನು ತೋರಿಸುತ್ತಿರಲಿಲ್ಲ. ತಕ್ಷಣ ಸ್ಥಳದಲ್ಲೇ CPR ಮಾಡಿ, ಆರೋಗ್ಯ ಚೇತರಿಸಿಕೊಳ್ಳುವಂತೆ ಮಾಡಿದ್ದಾರೆ.

ಮಹಿಳೆ ಹಾಗೂ ವೈದ್ಯ
Lok Sabha Election 2024 Voting Live Updates: ಸಂಜೆ 5 ಗಂಟೆವರೆಗೆ ಶೇ.63.90 ಮತದಾನ, ಮಂಡ್ಯದಲ್ಲಿ ಗರಿಷ್ಠ

ಚುನಾವಣಾ ಕರ್ತವ್ಯದಲ್ಲಿದ್ದವರು ಮಹಿಳೆಯ ನೆರವಿಗೆ ಬಂದಿದ್ದಾರೆ. ಬಳಿಕ ಐದು ನಿಮಿಷದೊಳಗೆ ಆ್ಯಂಬುಲೆನ್ಸ್ ಸ್ಥಳಕ್ಕೆ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವೈದ್ಯ ಗಣೇಶ್​ ಶ್ರೀನಿವಾಸ್​ ಪ್ರಸಾದ್​ ಮಾತನಾಡಿ, 50 ಆಸುಪಾಸಿನ ಮಹಿಳೆಯೊಬ್ಬರು ಕ್ಯಾನ್‌ನಲ್ಲಿ ನೀರು ಕುಡಿಯಲು ಬಂದಿದ್ದರು. ಮಹಿಳೆ ಅಸ್ವಸ್ಥರಾಗುತ್ತಿರುವುದು ಕಂಡು ನೆರವಿಗೆ ಧಾವಿಸಿದೆ. ಬಳಿಕ ಅವರ ನಾಡಿಮಿಡಿತವನ್ನು ಪರಿಶೀಲಿಸಿದೆ. ನಾಡಿಮಿಡಿತ ತುಂಬಾ ಕಡಿಮೆಯಾಗಿದೆ ಅಂತ ಕಂಡುಬಂತು. ಕಣ್ಣುಗಳು ಮೇಲಕ್ಕೆತ್ತಿ ಧಿಡೀರನೆ ಕುಸಿದರು. ಅವರ ದೇಹದಲ್ಲಿ ಚಲನವಲ ಇರಲಿಲ್ಲ. ಉಸಿರುಗಟ್ಟುತ್ತಿದ್ದರು. ತಕ್ಷಣ ಸಿಪಿಆರ್ ಮಾಡಿದೆ. ಸ್ವಲ್ಪ ಗುಣಮುಖರಾದರು. ಅವರ ಸ್ಥಿತಿ ಸುಧಾರಿಸಿತು. ಬಳಿಕ ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದರು. ಆಂಬ್ಯುಲೆನ್ಸ್​ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. 5 ನಿಮಿಷ ವಿಳಂಬವಾಗಿದ್ದರೂ ಆಕೆ ಬದುಕುಳಿಯುತ್ತಿರಲಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com