ಸುಮಲತಾ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೆ, ಆದರೂ ಪ್ರಚಾರಕ್ಕೆ ಬಂದಿಲ್ಲ: HDK ಸ್ಪಷ್ಟನೆ

ಸುಮಲತಾ ಅಂಬರೀಷ್ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೆವು. ಆದರೂ ಅವರು ಪ್ರಚಾರಕ್ಕೆ ಬಂದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ

ಮಂಡ್ಯ: ಸುಮಲತಾ ಅಂಬರೀಷ್ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೆವು. ಆದರೂ ಅವರು ಪ್ರಚಾರಕ್ಕೆ ಬಂದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ.

ಮದ್ದೂರು ತಾಲೂಕಿನ ಕೆ. ಹೊನ್ನಲಗೆರೆ ಗ್ರಾಮದಲ್ಲಿ ಶುಕ್ರವಾರ ಮತದಾನದ ಪ್ರಕ್ರಿಯೆ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದೆ ಸುಮಲತಾ ಅಂಬರೀಶ್ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಅವರಿಗೆ ಸಪೋರ್ಟ್ ಮಾಡುತ್ತಿಲ್ಲ ಎಂಬ ದೇವೇಗೌಡರ ಹೇಳಿಕೆ ಹಾಗೂ ಸುಮಲತಾ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದರು.

ದೇವೇಗೌಡ್ ಅವರು ಆ ರೀತಿ ಯಾಕೆ ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಅವರಿಗೆ ಮಾಹಿತಿ ಕೊರತೆ ಆಗಿರಬೇಕು ಎನಿಸುತ್ತಿದೆ. ಪಕ್ಷ ಭೇದ ಮರೆತು ಕಾಂಗ್ರೆಸ್, ಬಿಜೆಪಿ ನಾಯಕರು, ಕಾರ್ಯಕರ್ತರು ನನ್ನ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಯಾರು ಕೂಡ ವಿರೋಧ ಮಾಡಿಲ್ಲ. ಎಲ್ಲರೂ ನನಗೆ ಸಹಾಯ ಮಾಡುತ್ತಿದ್ದಾರೆಂದು ಹೇಳಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ
ದೇವೇಗೌಡರ ಹೇಳಿಕೆಯಿಂದ ಬೇಸರವಾಗಿದೆ, ಕ್ಷೇತ್ರ ತ್ಯಾಗ ಮಾಡಿದ್ದು ತಪ್ಪಾ?: ದಳಪತಿಗಳಿಗೆ ಸುಮಲತಾ ಟಾಂಗ್

ಇದೇ ವೇಳೆ ಕುಮಾರಸ್ವಾಮಿ ಪರ ಪ್ರಚಾರಕ್ಕೆ ಯಾರು ನನ್ನನ್ನು ಕರೆಯಲಿಲ್ಲ ಎಂಬ ಸುಮಲತಾ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿ, ನಾನು ಅವರ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೇನೆ. ಇದಕ್ಕಿಂತ ಇನ್ನೇನು ಮಾಡಬೇಕು. ನನಗೆ ಅಂಬರೀಷ್ ಅಭಿಮಾನಿಗಳು ಕೂಡ ನನಗೆ ಸಹಾಯ ಮಾಡಿದ್ದಾರೆಂದು ತಿಳಿಸಿದರು.

ನಾನು ಮೈಸೂರಿನ ಮೋದಿ ಕಾರ್ಯಕ್ರಮದಲ್ಲೂ ಕೂಡ ಸುಮಲತಾ ಅವರನ್ನು ಎರಡು ದಿನ ಪ್ರಚಾರಕ್ಕೆ ಬರುವಂತೆ ಕೋರಿದ್ದೆ. ಆದರೆ, ಅವರು ಪ್ರಚಾರಕ್ಕೆ ಯಾಕೇ ಬರಲಿಲ್ಲ ಎಂಬುದು ನನಗೆ ಗೊತ್ತಿಲ್ಲ. ಇವತ್ತು ಬೆಂಗಳೂರಿನಿಂದ ಬಂದು ಸುಮಲತಾ ಅವರು ನನಗೆ ಮತ ಹಾಕಿದ್ದಾರೆ. ಹೀಗಾಗಿ ನಾನು ರಾಜ್ಯದಲ್ಲೇ ಅತ್ಯಂತ ಬಹುಮತಗಳಿಂದ ಗೆಲ್ಲಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com