ಚಾಮರಾಜನಗರದ ಇಂಡಿಗನತ್ತ ಮತಗಟ್ಟೆ: ಮರು ಮತದಾನ ಪ್ರಗತಿಯಲ್ಲಿ

ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹನೂರಿನ ಇಂಡಿಗನಾಥ ಮತಗಟ್ಟೆಯಲ್ಲಿ ಸೋಮವಾರ ವ್ಯಾಪಕ ಭದ್ರತಾ ವ್ಯವಸ್ಥೆಗಳ ನಡುವೆ ಮರು ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹನೂರಿನ ಇಂಡಿಗನಾಥ ಮತಗಟ್ಟೆಯಲ್ಲಿ ಸೋಮವಾರ ವ್ಯಾಪಕ ಭದ್ರತಾ ವ್ಯವಸ್ಥೆಗಳ ನಡುವೆ ಮರು ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.

ಚಾಮರಾಜನಗರ ಜಿಲ್ಲೆಯ ಇಂಡಿಗನಾಥ ಗ್ರಾಮದ ಮತಗಟ್ಟೆಯಲ್ಲಿ ಎಪ್ರಿಲ್ 26ರಂದು ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಧ್ವಂಸಗೊಳಿಸಲಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮರು ಮತದಾನಕ್ಕೆ ಆದೇಶಿಸಿತ್ತು. ಜಿಲ್ಲಾಡಳಿತದ ಪ್ರಕಾರ, ಸಮರ್ಪಕ ಮೂಲಸೌಕರ್ಯ ಅಭಿವೃದ್ಧಿಯ ಕೊರತೆಯನ್ನು ಮುಂದಿಟ್ಟು ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ಈ ಹಿಂದೆ ನಿರ್ಧರಿಸಿದ್ದರು. ಆದರೆ, ಸ್ಥಳೀಯ ಅಧಿಕಾರಿಗಳ ಭರವಸೆ ಮತ್ತು ಪ್ರಯತ್ನದ ನಂತರ ಮತದಾನ ನಡೆಯುತ್ತಿದೆ.

ಸಾಂದರ್ಭಿಕ ಚಿತ್ರ
ಚಾಮರಾಜನಗರ: ಮತದಾನದ ವೇಳೆ ಗುಂಪು ಘರ್ಷಣೆ: ಮನವೊಲಿಸಲು ಯತ್ನಿಸಿದ ಅಧಿಕಾರಿಗಳ ಮೇಲೂ ಗ್ರಾಮಸ್ಥರ ದಾಳಿ, ಲಾಠಿ ಚಾರ್ಜ್!

ಏಪ್ರಿಲ್ 26 ರಂದು ಒಂದು ಗುಂಪು ಮತದಾನ ಮಾಡಲು ಬಯಸಿದ್ದರೆ, ಇನ್ನೊಂದು ಗುಂಪು ಬಹಿಷ್ಕಾರಕ್ಕೆ ಉತ್ಸುಕವಾಗಿತ್ತು, ಇದು ಅವರ ನಡುವೆ ಘರ್ಷಣೆಗೆ ಕಾರಣವಾಗಿ ಇವಿಎಂಗಳನ್ನು ಹಾನಿಗೊಳಿಸಿದರು ಮತ್ತು ಕಲ್ಲು ತೂರಾಟದಲ್ಲಿ ತೊಡಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಾಮರಾಜನಗರ ಕ್ಷೇತ್ರದ ಚುನಾವಣಾಧಿಕಾರಿ ಮತ್ತು ಸಾಮಾನ್ಯ ವೀಕ್ಷಕರು ಸಲ್ಲಿಸಿದ ವರದಿಗಳ ಆಧಾರದ ಮೇಲೆ ಮತ್ತು ಎಲ್ಲಾ ವಸ್ತುಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು, ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 146ರಲ್ಲಿ ಶುಕ್ರವಾರ ನಡೆದ ಮತದಾನವನ್ನು ಶುಕ್ರವಾರ ಅನೂರ್ಜಿತವಾಗಿತ್ತುಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿರುವ ಇಸಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com