V. Srinivas Prasad: ಕೇಂದ್ರ ಮಾಜಿ ಸಚಿವ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನ

ಇತ್ತೀಚೆಗೆ ಬಹು ಅಂಗಾಂಗ ವೈಫಲ್ಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.
ವಿ ಶ್ರೀನಿವಾಸ್ ಪ್ರಸಾದ್(ಸಂಗ್ರಹ ಚಿತ್ರ)
ವಿ ಶ್ರೀನಿವಾಸ್ ಪ್ರಸಾದ್(ಸಂಗ್ರಹ ಚಿತ್ರ)

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ ಪ್ರಸಾದ್ (V Srinivasa Prasad) (76 ವ) ನಿಧನ ಹೊಂದಿದ್ದಾರೆ. ಮಧ್ಯರಾತ್ರಿ 1.20ರ ಸುಮಾರಿಗೆ ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಇತ್ತೀಚೆಗೆ ಬಹು ಅಂಗಾಂಗ ವೈಫಲ್ಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ಮಧ್ಯರಾತ್ರಿ ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ನಿಧನ ಹೊಂದಿದ್ದಾರೆ.

ಅವರು ಪತ್ನಿ ಭಾಗ್ಯಲಕ್ಷ್ಮಿ ಪ್ರಸಾದ್, ಪುತ್ರಿಯರಾದ ಪ್ರತಿಮಾ ಪ್ರಸಾದ್, ಪೂರ್ಣಿಮಾ ಪ್ರಸಾದ್, ಪೂನಂ ಪ್ರಸಾದ್ ಹಾಗೂ ಅಪಾರ ಬಂಧು-ಮಿತ್ರರು, ಅಭಿಮಾನಿಗಳನ್ನು ಅಗಲಿದ್ದಾರೆ.

ಶ್ರೀನಿವಾಸ್ ಪ್ರಸಾದ್ ಅವರು ಇತ್ತೀಚೆಗೆ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಮೈಸೂರು, ಚಾಮರಾಜನಗರ ಭಾಗದ ಪ್ರಭಾವಿ ದಲಿತ ಮುಖಂಡರಾಗಿದ್ದರು. ಸ್ವಾಭಿಮಾನಿ ರಾಜಕಾರಣಿ ಎಂದೇ ಹೆಸರಾಗಿದ್ದರು. ಮೂಲತಃ ಮೈಸೂರಿನ ಅಶೋಕಪುರಂನವರಾದ ಶ್ರೀನಿವಾಸಪ್ರಸಾದ್ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

ಮೈಸೂರಿನ ಅಶೋಕಪುರಂನಲ್ಲಿ ಆಗಸ್ಟ್ 6, 1947 ರಂದು ಜನಿಸಿದ ಪ್ರಸಾದ್ ಅವರ ರಾಜಕೀಯ ಪ್ರಯಾಣವು ಮಹತ್ವದ ಮೈಲಿಗಲ್ಲುಗಳಿಂದ ಗುರುತಿಸಲ್ಪಟ್ಟಿದೆ. ಅವರು ಚಾಮರಾಜನಗರ ಕ್ಷೇತ್ರವನ್ನು ಏಳು ಅವಧಿಗೆ ಸಂಸದರಾಗಿ ಪ್ರತಿನಿಧಿಸಿದ್ದರು ಮತ್ತು ಎರಡು ಬಾರಿ ನಂಜನಗೂಡು ಕ್ಷೇತ್ರದಿಂದ ಶಾಸಕರಾಗಿದ್ದರು.

ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮತ್ತು ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಇಲಾಖೆ ಸಚಿವ ಸೇರಿದಂತೆ ಪ್ರಮುಖ ಸಚಿವ ಖಾತೆಗಳನ್ನು ಹೊಂದಿದ್ದರು.

ವಿ ಶ್ರೀನಿವಾಸ್ ಪ್ರಸಾದ್(ಸಂಗ್ರಹ ಚಿತ್ರ)
ಬಿಜೆಪಿಗೆ ಮತ್ತೊಂದು ಶಾಕ್; ಸಂಸದ ಶ್ರೀನಿವಾಸ್ ಪ್ರಸಾದ್ ಸಹೋದರ ಕಾಂಗ್ರೆಸ್ ಸೇರ್ಪಡೆ

ಡಿಸೆಂಬರ್ 2016 ರಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು ಮತ್ತು 2019 ರಲ್ಲಿ ಮತ್ತೆ ಚಾಮರಾಜನಗರದಿಂದ ಸಂಸದರಾಗಿ ಆಯ್ಕೆಯಾದರು, ಮತದಾರರಲ್ಲಿ ತಮ್ಮ ನಿರಂತರ ಜನಪ್ರಿಯತೆಯನ್ನು ಕಂಡುಕೊಂಡಿದ್ದರು.

ಮೃತದೇಹ ಮೈಸೂರಿಗೆ ರವಾನೆ: ಶ್ರೀನಿವಾಸ್ ಪ್ರಸಾದ್ ಅವರ ನಿಧನ ರಾಜಕೀಯ ಬಂಧುಗಳು ಮತ್ತು ಅವರ ಬೆಂಬಲಿಗರನ್ನು ಶೋಕದಲ್ಲಿ ಮುಳುಗಿಸಿದೆ. ಅವರ ಪಾರ್ಥಿವ ಶರೀರವನ್ನು ಮಣಿಪಾಲ ಆಸ್ಪತ್ರೆಯಿಂದ ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗುತ್ತಿದ್ದು, ಅವರ ಕುಟುಂಬ ಸದಸ್ಯರು, ರಾಜಕೀಯ ಬಂಧುಗಳು ಮತ್ತು ಹಿತೈಷಿಗಳು ಅಂತಿಮ ನಮನ ಸಲ್ಲಿಸಲು ಜಮಾಯಿಸುತ್ತಿದ್ದಾರೆ.

ಶ್ರೀನಿವಾಸ್ ಪ್ರಸಾದ್ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತಿದ್ದು, ಸಮಾಜದ ಎಲ್ಲಾ ವರ್ಗದ ಜನರು ತಮ್ಮ ಪ್ರೀತಿಯ ನಾಯಕನಿಗೆ ಬೀಳ್ಕೊಡಲು ಅನುವು ಮಾಡಿಕೊಡುವ ಮೂಲಕ ಮೈಸೂರಿನ ವಸ್ತುಪ್ರದರ್ಶನ ಮೈದಾನವು ಶೋಕಸಾಗರಕ್ಕೆ ಸಾಕ್ಷಿಯಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com