Actor Darshan ನ್ಯಾಯಾಂಗ ಬಂಧನದ ಅವಧಿ ಆಗಸ್ಟ್ 14ರವರೆಗೆ ವಿಸ್ತರಣೆ

ನಟ ದರ್ಶನ್‌, ಪವಿತ್ರಾ ಗೌಡ (Pavitra Gowda) ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.
Actor Darshan
ನಟ ದರ್ಶನ್
Updated on

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ (RenukaSwamy Murder Case)ನಲ್ಲಿ ಬಂಧನಕ್ಕೀಡಾಗಿರುವ ನಟ ದರ್ಶನ್ (Actor Darshan)ಗೆ ಬೆಂಗಳೂರು ಕೋರ್ಟ್ ಮತ್ತೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಿದೆ.

ಹೌದು.. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy case) ನಟ ದರ್ಶನ್‌ (Actor Darshan) ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಿ ನ್ಯಾಯಾಲಯ ಗುರುವಾರ(ಆ.1ರಂದು) ಆದೇಶಿಸಿದ್ದು, ದರ್ಶನ್ ಅಂಡ್ ಗ್ಯಾಂಗ್ ಕೋರ್ಟ್ ಮತ್ತೆ 14 ದಿನ ಅಂದರೆ ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದೆ.

Actor Darshan
ಕೈದಿಗಳಲ್ಲಿ ಭೇದವೇಕೆ?: ನಟ ದರ್ಶನ್ ಮನೆ ಊಟ ಬೇಡಿಕೆ ಅರ್ಜಿ ಕುರಿತು Karnataka High Court ಹೇಳಿಕೆ

ನಟ ದರ್ಶನ್‌, ಪವಿತ್ರಾ ಗೌಡ (Pavitra Gowda) ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

ಈ ಸಂಬಂಧ ಪೊಲೀಸರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯ ವಿಸ್ತರಣೆಯನ್ನು ಕೋರಿ ನ್ಯಾಯಾಧೀಶರ ಮುಂದೆ ರಿಮ್ಯಾಂಡ್‌ ಕಾಪಿಯನ್ನು ಸಲ್ಲಿಸಿ ಮನವಿ ಮಾಡಿತ್ತು.

ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಧೀಶ ವಿಶ್ವನಾಥ ಸಿ ಗೌಡರ್ ನೇತೃತ್ವದ ಪೀಠ ಆಗಸ್ಟ್‌ 14 ರವರೆಗೆ ವಿಸ್ತರಣೆ ಮಾಡಿ ಆದೇಶ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com