ಸಹೋದರರಂತೆ ಬಾಳಿ; ಕನ್ನಡಿಗರು ಎಷ್ಟು ದಿನ ನಿಮ್ಮ ಅಧಿಪತ್ಯ ಅನುಭವಿಸಬೇಕು: ಸಿಎಂ ಸ್ಟಾಲಿನ್‌ಗೆ ಕುಮಾರಸ್ವಾಮಿ

ಕರ್ನಾಟಕ ಮತ್ತು ತಮಿಳುನಾಡಿನ ಜನರು ಸಹೋದರರಂತೆ ಬದುಕಬೇಕು ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಶನಿವಾರ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ಮನವಿ ಮಾಡಿದರು.
ಸ್ಟಾಲಿನ್-ಕುಮಾರಸ್ವಾಮಿ
ಸ್ಟಾಲಿನ್-ಕುಮಾರಸ್ವಾಮಿ
Updated on

ಬೆಂಗಳೂರು: ಮೇಕೆದಾಟು ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಮತ್ತು ತಮಿಳುನಾಡಿನ ಮೆಟ್ಟೂರು ಜಲಾಶಯದಿಂದ ಸಮುದ್ರಕ್ಕೆ ಹರಿಯುವ ನೀರನ್ನು ಬಳಸಿಕೊಳ್ಳಲು ಕರ್ನಾಟಕ ಮತ್ತು ತಮಿಳುನಾಡಿನ ಜನರು ಸಹೋದರರಂತೆ ಬದುಕಬೇಕು ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಶನಿವಾರ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ಮನವಿ ಮಾಡಿದರು.

ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ನೀಡಿದ ಸಭೆಯನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಸಮಸ್ಯೆಗಳ ಪರಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವರಿಕೆ ಮಾಡಿಕೊಡುತ್ತೇವೆ. ತಮಿಳುನಾಡಿಗೆ ನಾವು ಯಾವುದೇ ಅನ್ಯಾಯ ಮಾಡುವುದಿಲ್ಲ. ಸಹೋದರರಂತೆ ಬಾಳಬೇಕು ಎಂದು ತಮಿಳುನಾಡು ಸಿಎಂಗೆ ತಿಳಿಸುತ್ತೇನೆ. ಈ ಭಾರತೀಯ ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕದ ಜನರು ನಿಮ್ಮ ಅಧಿಪತ್ಯ ಎಷ್ಟು ದಿನ ಅನುಭವಿಸಬೇಕು? ಎಂದು ಪ್ರಶ್ನಿಸಿದ್ದಾರೆ.

ಲೋಕಸಭೆಯಲ್ಲಿ ಧ್ವನಿ ಎತ್ತಲು ಕರ್ನಾಟಕದ ಜನತೆ ನಮಗೆ ಶಕ್ತಿ ನೀಡಿದ್ದಾರೆ. ಕರ್ನಾಟಕಕ್ಕೆ ಸರಿಯಾದ ನೀರಿನ ಹಂಚಿಕೆಯನ್ನು ಪಡೆಯಲು ಮತ್ತು ನ್ಯಾಯ ಪಡೆಯಲು ನಾವು ಪ್ರಾಮಾಣಿಕವಾಗಿ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಜಲಸಂಪನ್ಮೂಲ ಸಚಿವರಾಗಿಯೂ ಕೆಲಸ ಮಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನೆರವು ಪಡೆಯುತ್ತೇನೆ. ಒಟ್ಟಾಗಿ ಶ್ರಮಿಸುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.

ಸ್ಟಾಲಿನ್-ಕುಮಾರಸ್ವಾಮಿ
ಮುಡಾ ಅಕ್ರಮ ವಿರುದ್ಧ ಬಿಜೆಪಿ-ಜೆಡಿಎಸ್ 'ಮೈಸೂರು ಚಲೋ' ಪಾದಯಾತ್ರೆಗೆ ಚಾಲನೆ; ಸಿಎಂ ರಾಜೀನಾಮೆಗೆ ಪಟ್ಟು

ಜುಲೈನಲ್ಲಿ ಕರ್ನಾಟಕ ತಮಿಳುನಾಡಿಗೆ 30 ಟಿಎಂಸಿ ನೀರು ಬಿಡಬೇಕಿದ್ದು, 50 ಟಿಎಂಸಿಗೂ ಹೆಚ್ಚು ನೀರು ಹರಿದಿದೆ. ಸಮುದ್ರಕ್ಕೆ ಸೇರುತ್ತಿರುವ ಮೆಟ್ಟೂರು ಅಣೆಕಟ್ಟಿನ ಹೆಚ್ಚುವರಿ ನೀರನ್ನು ತಮ್ಮ ಸರ್ಕಾರ ಸಂಗ್ರಹಿಸಬೇಕು ಎಂದು ತಮಿಳುನಾಡು ರೈತರು ಒತ್ತಾಯಿಸುತ್ತಿದ್ದಾರೆ. 2018-19ರಲ್ಲಿ ರಾಜ್ಯದಿಂದ ತಮಿಳುನಾಡಿಗೆ 600 ಟಿಎಂಸಿ ನೀರು ಹರಿದು ಬಂದಿದೆ. ಮೇಕೆದಾಟು ಸಮಸ್ಯೆ 125 ವರ್ಷಗಳ ಹಿಂದಿನ ವಿವಾದವಾಗಿದ್ದು, ಒಂದೇ ರಾತ್ರಿಯಲ್ಲಿ ಇದನ್ನು ಬಗೆಹರಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com