ಬಿಡದಿ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ತಿಮ್ಮೇಗೌಡ ಶವ ಪತ್ತೆ

50ರ ಹರೆಯದ ಇನ್ಸ್‌ಪೆಕ್ಟರ್ ತಿಮ್ಮೇಗೌಡ ಅವರು ನಗರದ ಹೊರವಲಯದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಇತ್ತೀಚೆಗೆ ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.
ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ
ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ
Updated on

ಬೆಂಗಳೂರು: ಬೆಂಗಳೂರು ಪೊಲೀಸ್‌ನ ಕೇಂದ್ರ ಅಪರಾಧ ವಿಭಾಗದ (CCB) ಇನ್‌ಸ್ಪೆಕ್ಟರ್‌ ಇಂದು ಸೋಮವಾರ ನಗರದ ಹೊರವಲಯದಲ್ಲಿರುವ ಬಿಡದಿಯ ನಿರ್ಜನ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

50ರ ಹರೆಯದ ಇನ್ಸ್‌ಪೆಕ್ಟರ್ ತಿಮ್ಮೇಗೌಡ ಅವರು ನಗರದ ಹೊರವಲಯದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಇತ್ತೀಚೆಗೆ ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಕೂಡ ಸಿಕ್ಕಿಲ್ಲ. ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿಲ್ಲ. ಅವರು ಈ ತೀವ್ರವಾದ ಕ್ರಮಕ್ಕೆ ಕಾರಣವಾದ ನಿಖರವಾದ ಕಾರಣ ನಮಗೆ ತಿಳಿದಿಲ್ಲ. ನಾವು ಮರಣೋತ್ತರ ಪರೀಕ್ಷೆಯ ವರದಿಯನ್ನು ಪಡೆದ ನಂತರವೇ, ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಬಹುದು. ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯಾದಗಿರಿಯಲ್ಲಿ 34 ವರ್ಷದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರಶುರಾಮ್ ಮೃತಪಟ್ಟ ಮೂರು ದಿನಗಳ ನಂತರ ಈ ಘಟನೆ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com