ಗುಡುಗು ಸಹಿತ ಮಳೆ: ಬೆಂಗಳೂರಿನ ಹಲವೆಡೆ ಜನಜೀವನ ಅಸ್ತವ್ಯಸ್ತ

ಮಳೆಯ ಪರಿಣಾಮ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಜನರು ಪರದಾಡುವಂತಾಗಿತ್ತು. ಕೆಲವೇ ಗಂಟೆಗಳಲ್ಲಿ ಸುರಿದ ಮಳೆ ನಗರದ ಪರಿಸ್ಥಿತಿಯನ್ನು ಅಸ್ತವ್ಯಸ್ತಗೊಳಿಸಿದ್ದರ ಬಗ್ಗೆ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
rain (file pic)
ಮಳೆ (ಸಂಗ್ರಹ ಚಿತ್ರ)online desk
Updated on

ಬೆಂಗಳೂರು: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ರಸ್ತೆಗಳು ಜಲಾವೃತಗೊಂಡಿದ್ದು, ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗಿದ್ದನ್ನು ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಹಂಚಿಕೊಂಡಿದ್ದಾರೆ. ಐಎಂಡಿ ಮಾಹಿತಿಯ ಪ್ರಕಾರ, ಬೆಂಗಳೂರು ಹೊರತುಪಡಿಸಿ ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗಿದೆ.

ಮಳೆಯ ಪರಿಣಾಮ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಜನರು ಪರದಾಡುವಂತಾಗಿತ್ತು. ಕೆಲವೇ ಗಂಟೆಗಳಲ್ಲಿ ಸುರಿದ ಮಳೆ ನಗರದ ಪರಿಸ್ಥಿತಿಯನ್ನು ಅಸ್ತವ್ಯಸ್ತಗೊಳಿಸಿದ್ದರ ಬಗ್ಗೆ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಈ ನಡುವೆ ರಸ್ತೆಗಳು ಜಲಾವೃತಗೊಂಡಿದ್ದರ ಪರಿಣಾಮದಿಂದಾಗಿ ಜನತೆಗೆ ಟ್ರಾಫಿಕ್ ಸಮಸ್ಯೆಗಳ ಬಗ್ಗೆ ಪೊಲೀಸರು ಎಚ್ಚರಿಕೆ ನೀಡುವುದಕ್ಕೆ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡಿದ್ದಾರೆ.

ಆರ್ ಟಿ ನಗರ ಟ್ರಾಫಿಕ್ ಬಿಟಿಪಿ ಹ್ಯಾಂಡಲ್ ಎಕ್ಸ್‌ನಲ್ಲಿ ಜಯಮಹಲ್ ರಸ್ತೆ, ವೈಟ್ ಪೆಟಲ್ಸ್ ಬ್ಯಾಕ್ ಗೇಟ್ ಬಳಿ, ಮೇಖ್ರಿ ಸರ್ಕಲ್ ಕಡೆಗೆ ನೀರು ಹರಿಯುವ ಬಗ್ಗೆ ಎಚ್ಚರಿಕೆ ನೀಡಿ, ಸಾಧ್ಯವಾದರೆ ಆ ಮಾರ್ಗವನ್ನು ತಪ್ಪಿಸುವಂತೆ ಜನರಿಗೆ ಪೊಲೀಸ್ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ನಗರದಲ್ಲಿ ಎರಡು ತಿಂಗಳ ಕಾಲ ಗುಡುಗು ಸಹಿತ ಮಳೆ ಸುರಿಯುತ್ತಿದ್ದರೂ ಪೌರಕಾರ್ಮಿಕರು ಚರಂಡಿ ತೆರವುಗೊಳಿಸಿಲ್ಲ ಅಥವಾ ರಸ್ತೆ ದುರಸ್ತಿ ಮಾಡಿಲ್ಲ ಎಂದು ಹವಾಗುಣ ವೀಕ್ಷಕರು ಬೇಸರ ವ್ಯಕ್ತಪಡಿಸಿದ್ದಾರೆ.

rain (file pic)
Weather Alert: ಕರ್ನಾಟಕದಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ; ಕರಾವಳಿಗೆ ಆರೆಂಜ್, ಮಲೆನಾಡಿಗೆ ಎಲ್ಲೋ ಅಲರ್ಟ್- ಹವಾಮಾನ ಇಲಾಖೆ

ಎಕ್ಸ್ ಹ್ಯಾಂಡಲ್ ಕರ್ನಾಟಕ ಹವಾಮಾನದ ಪ್ರಕಾರ, ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲಿ, ವಿಶೇಷವಾಗಿ ಕಾವೇರಿ ವನ್ಯಜೀವಿ ಅಭಯಾರಣ್ಯ, ಬೆಳಗಾವಿ ಜಿಲ್ಲೆಯ ಕೆಲವು ಭಾಗಗಳು, ಗದಗಿನ ಲಕ್ಷ್ಮೇಶ್ವರ ಬಳಿ, ಹಾವೇರಿಯ ಶಿಗ್ಗಾಂವ್ ಮತ್ತು ಧಾರವಾಡ ನಗರದಲ್ಲಿ ಗುಡುಗು ಸಹಿತ ಮಳೆಯಾಗಿದೆ.

ಕರ್ನಾಟಕದ ಒಳ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮನಾಲಿಯಿಂದ ಭಟ್ಕಳದವರೆಗೆ ಉತ್ತರ ಕನ್ನಡದ ಕರಾವಳಿಯಲ್ಲಿ ಹೆಚ್ಚಿನ ಅಲೆಗಳ ಎಚ್ಚರಿಕೆಯನ್ನು ನೀಡಿದ್ದು, ಮೀನುಗಾರಿಕೆ ಮತ್ತು ಹತ್ತಿರದ ಮನರಂಜನಾ ಚಟುವಟಿಕೆಗಳ ಬಗ್ಗೆ ಎಚ್ಚರಿಕೆಯನ್ನು ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com