ಕಮಿಷನ್ ಪೊಲೀಸರನ್ನು ದುರ್ಬಲಗೊಳಿಸುತ್ತದೆ: ಭಾಸ್ಕರ್ ರಾವ್

‘ಹೆಚ್ಚಿನ ಹಣ ವಸೂಲಿ ಮಾಡುವಂತೆ ರಾಜ್ಯ ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದು, ಭ್ರಷ್ಟ ಕೃತ್ಯಗಳಿಗೆ ಎಡೆಮಾಡಿಕೊಡುತ್ತಿದೆ. ಇದು ರಾಜ್ಯ ಪೊಲೀಸರನ್ನು ದುರ್ಬಲಗೊಳಿಸಿದೆ'
ಭಾಸ್ಕರ್ ರಾವ್
ಭಾಸ್ಕರ್ ರಾವ್
Updated on

ಚಿತ್ರದುರ್ಗ: ರಾಜ್ಯ ಪೊಲೀಸರು ಸಂಪೂರ್ಣವಾಗಿ ದುರ್ಬಲರಾಗಿದ್ದಾರೆ ಎಂದು ಬೆಂಗಳೂರು ನಗರದ ನಿವೃತ್ತ ಪೊಲೀಸ್ ಕಮಿಷನರ್ ಮಂಗಳವಾರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹೆಚ್ಚಿನ ಹಣ ವಸೂಲಿ ಮಾಡುವಂತೆ ರಾಜ್ಯ ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದು, ಭ್ರಷ್ಟ ಕೃತ್ಯಗಳಿಗೆ ಎಡೆಮಾಡಿಕೊಡುತ್ತಿದೆ. ಇದು ರಾಜ್ಯ ಪೊಲೀಸರನ್ನು ದುರ್ಬಲಗೊಳಿಸಿದೆ ಎಂದರು.

ಕಮಿಷನ್ ಕೊಡುವವರೆಗೂ ಪೊಲೀಸರಿಗೆ ಸರಿಯಾದ ಪೋಸ್ಟಿಂಗ್ ನೀಡುವುದಿಲ್ಲ. ಇದು ಅವರ ಸೇವೆಗಳ ಮೇಲೆ ಪರಿಣಾಮ ಬೀರುತ್ತಿದೆ. ಇನ್ನುಳಿದ ಇಲಾಖೆಗಳಲ್ಲಿ ಗುತ್ತಿಗೆ, ಟೆಂಡರ್, ಪರ್ಸೆಂಟೇಜ್ ಗಳಿಂದ ಕಮಿಷನ್ ಬರುತ್ತದೆ. ಆದರೆ ಪೊಲೀಸ್ ಇಲಾಖೆಯಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಬೇಕಿದ್ದು, ಹಣ ಪಾವತಿಸುವಂತೆ ಸರ್ಕಾರ ಪೊಲೀಸ್ ಇಲಾಖೆಗೆ ಒತ್ತಡ ಹೇರುತ್ತಿರುವುದು PSI ಪರಶುರಾಮ್ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಅವರು ಹೇಳಿದರು.

ಭಾಸ್ಕರ್ ರಾವ್
ಕಾಂಗ್ರೆಸ್ ಆಡಳಿತದಲ್ಲಿ ದಲಿತರು ಸುರಕ್ಷಿತವಾಗಿಲ್ಲ, PSI ಸಾವು ಪ್ರಕರಣ ಸಿಬಿಐ ತನಿಖೆಗೆ ವಹಿಸಿ: ಆರ್.ಅಶೋಕ್

ಬಲಿಷ್ಠ ಮುಖ್ಯಮಂತ್ರಿಯಿದ್ದರೆ ಈ ರೀತಿಯ ಕಮಿಷನ್ ಘಟನೆಗಳು ನಡೆಯುವುದಿಲ್ಲ, ಆದರೆ, ನಮ್ಮಲ್ಲಿ ಒಬ್ಬ ದುರ್ಬಲ ಮುಖ್ಯಮಂತ್ರಿ ಇದ್ದಾರೆ ಎಂದು ಭಾಸ್ಕರ್ ರಾವ್ ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com