ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲು

ದೂರುದಾರರಾದ ಮೈಸೂರು ಮೂಲದ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರು ಈ ಹಗರಣದಲ್ಲಿ ಮುಖ್ಯಮಂತ್ರಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಖಾಸಗಿ ದೂರು ದಾಖಲಾಗಿದೆ.

ದೂರುದಾರರಾದ ಮೈಸೂರು ಮೂಲದ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರು ಈ ಹಗರಣದಲ್ಲಿ ಮುಖ್ಯಮಂತ್ರಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ.

'ಸಿದ್ದರಾಮಯ್ಯ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ಅವರು ಖಾಸಗಿ ದೂರು ದಾಖಲಿಸಿದ್ದು, ಈ ಕುರಿತು ಸಿಬಿಐ ಅಥವಾ ಇತರ ಯಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವಂತೆ ನಿರ್ದೇಶನ ನೀಡಿ ಎಂದು ನ್ಯಾಯಾಲಯಕ್ಕೆ ಕೋರಿದ್ದಾರೆ.

ಸಿದ್ದರಾಮಯ್ಯ
MUDA scam: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ಸುಳ್ಳು ದೂರುಗಳಿಗೆ ಉತ್ತರಿಸುವ ಶಕ್ತಿ ನನಗಿದೆ’. 'ಸುಳ್ಳು ಪ್ರಕರಣಗಳು ಕಾನೂನಿನ ಮುಂದೆ ನಿಲ್ಲುವುದಿಲ್ಲ' ಎಂದು ಸಿಎಂ ಮೈಸೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com