ಪ್ರತ್ಯೇಕ ಅಪಘಾತ: ಮೂವರು ಬೈಕ್ ಸವಾರರ ದುರ್ಮರಣ

ವಿಜಯನಗರದ ಹೊಸಪೇಟೆ ತಾಲೂಕಿನ ಬುಕ್ಕಸಾಗರ ಗ್ರಾಮದಲ್ಲಿ ಬೈಕ್‌ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ
ಡಿಕ್ಕಿಯಾಗಿ ಲಾರಿ ಅಡಿಯಲ್ಲಿ ಸಿಲುಕಿರುವ ಬೈಕ್ ಚಿತ್ರ
ಡಿಕ್ಕಿಯಾಗಿ ಲಾರಿ ಅಡಿಯಲ್ಲಿ ಸಿಲುಕಿರುವ ಬೈಕ್ ಚಿತ್ರ
Updated on

ಬೆಂಗಳೂರು: ರಾಜ್ಯದ ವಿವಿಧೆಡೆ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಮೂವರು ಬೈಕ್ ಸವಾರರು ದುರ್ಮರಣ ಹೊಂದಿದ್ದಾರೆ.

ವಿಜಯನಗರದ ಹೊಸಪೇಟೆ ತಾಲೂಕಿನ ಬುಕ್ಕಸಾಗರ ಗ್ರಾಮದಲ್ಲಿ ಬೈಕ್‌ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ.

ಶಂಕರ್ (26) ಮೃತ ದುರ್ದೈವಿ. ಶಂಕರ್, ಸುಂಕಪ್ಪ ಇಬ್ಬರೂ ಪಿಕೆ ಹಳ್ಳಿ ಗ್ರಾಮದವರು. ಬುಕ್ಕಸಾಗರಿಂದ ಗಂಗಾವತಿಯತ್ತ ಬೈಕ್ ಬರುವಾಗ ಮುಖಾಮುಖಿ ಡಿಕ್ಕಿ ಆಗಿದೆ. ಮತ್ತೊಂದೆಡೆ, ಕೊಡಗಿನ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಬೈಕ್‌ವೊಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಕೊಡಗಿನ ಸುಂಟಿಕೊಪ್ಪ ಬಳಿಯ ಶಾಂತಿಗೇರಿಯಲ್ಲಿ ರಾತ್ರಿ ಅಪಘಾತ ನಡೆದಿದೆ.

ಡಿಕ್ಕಿಯಾಗಿ ಲಾರಿ ಅಡಿಯಲ್ಲಿ ಸಿಲುಕಿರುವ ಬೈಕ್ ಚಿತ್ರ
ಬೆಂಗಳೂರಿನಲ್ಲಿ ಮೂರು ಪ್ರತ್ಯೇಕ ರಸ್ತೆ ಅಪಘಾತ; ಮೂವರ ದುರ್ಮರಣ, ಐವರಿಗೆ ಗಾಯ!

ಡಿಕ್ಕಿ ರಭಸಕ್ಕೆ ಬೈಕ್‌ ಸವಾರರು ಇಬ್ಬರು ದುರ್ಮರಣ ಹೊಂದಿದ್ದಾರೆ. ಪ್ರಸನ್ನ(24), ಆಕಾಶ್(24) ಮೃತ ದುರ್ದೈವಿಗಳು. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com