ಕಾಂಗ್ರೆಸ್ ಎಂಎಲ್ ಸಿ ಐವಾನ್ ಡಿಸೋಜಾ
ಕಾಂಗ್ರೆಸ್ ಎಂಎಲ್ ಸಿ ಐವಾನ್ ಡಿಸೋಜಾ

ಮಂಗಳೂರಿನಿಂದ ಪುತ್ತೂರಿಗೆ SP ಕಚೇರಿ ಸ್ಥಳಾಂತರ: ಪ್ರಸ್ತಾವನೆ ಕೈ ಬಿಟ್ಟ ಕಾಂಗ್ರೆಸ್ ಸರ್ಕಾರ

2020ರಲ್ಲಿ ಬಿಜೆಪಿಯ ಅಂದಿನ ಪುತ್ತೂರು ಶಾಸಕ ಸಂಜೀವ ಮಠಂದೂರು ಎಸ್‌ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸಲು ಮುಂದಾಗಿದ್ದರು. ಅಂದಿನ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದಾಗಿ ತಿಳಿಸಿದ್ದರು.
Published on

ಮಂಗಳೂರು: ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಚೇರಿಯನ್ನು ಮಂಗಳೂರಿನಿಂದ ಪುತ್ತೂರಿಗೆ ಸ್ಥಳಾಂತರಿಸುವ ಪ್ರಸ್ತಾವನೆಯನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಕೈಬಿಟ್ಟಿದೆ.

2020ರಲ್ಲಿ ಬಿಜೆಪಿಯ ಅಂದಿನ ಪುತ್ತೂರು ಶಾಸಕ ಸಂಜೀವ ಮಠಂದೂರು ಎಸ್‌ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸಲು ಮುಂದಾಗಿದ್ದರು. ಅಂದಿನ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದಾಗಿ ತಿಳಿಸಿದ್ದರು. ಎಸ್ಪಿ ಮತ್ತು ಡಿಎಆರ್ ಕಚೇರಿಗಳನ್ನು ಸ್ಥಳಾಂತರಿಸಲು ಮತ್ತು ಪೊಲೀಸ್ ಕ್ವಾರ್ಟರ್ಸ್ ಸ್ಥಾಪಿಸಲು ಪುತ್ತೂರು ಪೇಟೆಯ ಮೂರು ಭಾಗಗಳಲ್ಲಿ 19 ಎಕರೆಗೂ ಹೆಚ್ಚು ಭೂಮಿಯನ್ನು ಕಾಯ್ದಿರಿಸಲಾಗಿದೆ ಎಂದು ತಿಳಿಸಿದ್ದರು. ಪುತ್ತೂರಿನಲ್ಲಿ ಎಸ್ಪಿ ಕಚೇರಿ ಸ್ಥಾಪಿಸಿದರೆ ದಕ್ಷಿಣ ಕನ್ನಡ ಪೊಲೀಸ್ ವ್ಯಾಪ್ತಿಯ ಎಲ್ಲಾ ಗಡಿಗಳು 50-60 ಕಿಲೋಮೀಟರ್ ವ್ಯಾಪ್ತಿಯಲ್ಲಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದರು. ಮತ್ತೊಂದೆಡೆ, ಪ್ರಸ್ತುತ ಎಸ್ಪಿ ಕಚೇರಿ ಇರುವ ಮಂಗಳೂರು ನಗರದಿಂದ 100 ಕಿಲೋಮೀಟರ್ ದೂರದಲ್ಲಿರುವ ಸುಳ್ಯ ಅಥವಾ ಸುಬ್ರಹ್ಮಣ್ಯಕ್ಕೆ ಎಸ್ಪಿ ಮತ್ತು ಡಿಎಆರ್ ಪೊಲೀಸರು ತಲುಪಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಅವರು ತಿಳಿಸಿದ್ದರು.

ಇತ್ತೀಚೆಗೆ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಎಸ್‌ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸಲು ಕೈಗೊಂಡಿರುವ ನಿರ್ಣಯದ ಬಗ್ಗೆ ಮಾತನಾಡಿದ ಎಂಎಲ್‌ಸಿ ಐವನ್‌ ಡಿಸೋಜಾ ಕಚೇರಿ ಸ್ಥಳಾಂತರವಾದರೇ ಆಗುವ ಸಮಸ್ಯೆಗಳ ಬಗ್ಗೆವಿವರಿಸಿದ್ದರು. ಎಸ್ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಅಥವಾ ಈ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ತಮ್ಮ ಉತ್ತರದಲ್ಲಿ ಖಡಾಖಂಡಿತವಾಗಿ ಹೇಳಿದರು. ಎಸ್ಪಿ ಕಚೇರಿ ಸ್ಥಳಾಂತರಕ್ಕೆ ಯಾವುದೇ ಜಮೀನು ಗುರುತಿಸಿಲ್ಲ ಎಂದು ಸಹ ಹೇಳಿದರು.

ಕಾಂಗ್ರೆಸ್ ಎಂಎಲ್ ಸಿ ಐವಾನ್ ಡಿಸೋಜಾ
ಮಂಗಳೂರು: ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಹತ್ಯೆ ಆರೋಪಿಯ ಅಟ್ಟಾಡಿಸಿ ಕೊಲೆ

ಕಾನೂನು ಮತ್ತು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಪುತ್ತೂರು, ಸುಳ್ಯ ಮತ್ತು ಕಡಬ ತಾಲೂಕುಗಳ ವ್ಯಾಪ್ತಿಯಲ್ಲಿ ಡಿವೈಎಸ್ಪಿ ಕಚೇರಿ ಪುತ್ತೂರಿನಿಂದ ಕಾರ್ಯನಿರ್ವಹಿಸುತ್ತಿದ್ದು, ಬಂಟ್ವಾಳ ಮತ್ತು ಬೆಳ್ತಂಗಡಿ ವ್ಯಾಪ್ತಿಯಲ್ಲಿ ಮತ್ತೊಂದು ಡಿವೈಎಸ್ಪಿ ಕಚೇರಿ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಚೇರಿಗಳು, ಸಮಾಜ ಕಲ್ಯಾಣ ಹಾಗೂ ಇತರೆ ಇಲಾಖೆಗಳ ಕಚೇರಿಗಳು ಮಂಗಳೂರಿನಿಂದಲೇ ಕಾರ್ಯ ನಿರ್ವಹಿಸುತ್ತಿರುವುದರಿಂದ ಎಸ್ಪಿ ಕಚೇರಿಯೂ ಮಂಗಳೂರಿನಲ್ಲಿದ್ದರೆ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ ಎಂದರು. ಅಲ್ಲದೆ, ತುರ್ತು ಸಂದರ್ಭಗಳಲ್ಲಿ ಉನ್ನತ ಅಧಿಕಾರಿಗಳು ಚರ್ಚೆ ಮತ್ತು ಸಭೆಗಳನ್ನು ನಡೆಸಲು ಸಹಾಯಕವಾಗುತ್ತದೆ. ಎಸ್ಪಿ ಕಚೇರಿಯನ್ನು ಮಂಗಳೂರಿನಿಂದ ಹೊರಕ್ಕೆ ಸ್ಥಳಾಂತರಿಸುವುದರಿಂದ ಇತರ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಿದರೆ ಮಾತ್ರ ಸಹಾಯಕವಾಗುತ್ತದೆ. ಇದಲ್ಲದೆ, ಹುಬ್ಬಳ್ಳಿ-ಧಾರವಾಡ, ಮೈಸೂರು, ಬೆಳಗಾವಿ ಮತ್ತು ಕಲಬುರ್ಗಿಯ ಎಸ್ಪಿ ಕಚೇರಿಗಳು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿವೆ ಎಂದು ಸಚಿವರು ಹೇಳಿದರು.

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಇತರ ಎಸ್ಪಿ ಕಚೇರಿಗಳಂತೆ ಮಂಗಳೂರು ಎಸ್ಪಿ ಕಚೇರಿ ಕೇಂದ್ರ ಸ್ಥಾನದಲ್ಲಿಲ್ಲ ಎಂದು ಮಠಂದೂರು ವಾದಿಸಿದರು. "ಆ ನಗರಗಳಲ್ಲಿ, ಜಿಲ್ಲಾ ಕೇಂದ್ರವು ಜಿಲ್ಲೆಯ ಕೇಂದ್ರದಲ್ಲಿದೆ ಆದರೆ ದಕ್ಷಿಣ ಕನ್ನಡದಲ್ಲಿ ಅದು ಒಂದು ಮೂಲೆಯಲ್ಲಿದೆ" ಎಂದು ಅವರು ಹೇಳಿದರು. ಚರ್ಚೆಯ ವೇಳೆ ಮಾಜಿ ಡಿಜಿ ಮತ್ತು ಐಜಿಪಿ ಮತ್ತು ಎಡಿಜಿಪಿ (ಕಾನೂನು ಸುವ್ಯವಸ್ಥೆ) ಕೂಡ ಪುತ್ತೂರಿನಲ್ಲಿ ಎಸ್ಪಿ ಕಚೇರಿ ಸ್ಥಾಪಿಸುವುದು ಸೂಕ್ತ ಎಂದು ತಮ್ಮ ಪ್ರಸ್ತಾವನೆಯನ್ನು ಬೆಂಬಲಿಸಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com