ತುಂಗಾ ಭದ್ರಾ ಡ್ಯಾಂ ಕ್ರೆಸ್ಟ್ ಗೇಟ್ ಘಟನೆಯ ನಂತರ, ಹಾರಂಗಿ ಜಲಾಶಯದ ಮೇಲೆ ಅಧಿಕಾರಿಗಳ ನಿಗಾ

ಅಧಿಕಾರಿಗಳು ದಿನವಿಡೀ ಜಲಾಶಯದ ಒಳಹರಿವು ಮತ್ತು ಹೊರಹರಿವಿನ ಬಗ್ಗೆ ನಿಗಾ ಇಡುತ್ತಿದ್ದಾರೆ. ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ ಮತ್ತು ಅಣೆಕಟ್ಟಿನ ನೀರಿನ ಮಟ್ಟವನ್ನು ಕಾಯ್ದುಕೊಳ್ಳಲಾಗುತ್ತಿದೆ ಎಂದು ವಿವರಿಸಿದ್ದಾರೆ.
ಹಾರಂಗಿ ಜಲಾಶಯ
ಹಾರಂಗಿ ಜಲಾಶಯ
Updated on

ಮಡಿಕೇರಿ: ತುಂಗಭದ್ರಾ ಅಣೆಕಟ್ಟೆಯಲ್ಲಿ ಕ್ರೆಸ್ಟ್ ಗೇಟ್ ಕೊಚ್ಚಿಹೋದ ಘಟನೆ ಹಿನ್ನೆಲೆಯಲ್ಲಿ ಕೊಡಗಿನ ಹಾರಂಗಿ ಜಲಾಶಯದ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಅಧಿಕಾರಿಗಳು ಭಾನುವಾರ ವಿವರವಾದ ಪರಿಶೀಲನೆ ನಡೆಸಿ ಜಲಾಶಯಕ್ಕೆ ಭೇಟಿ ನೀಡುವ ಜನರ ಸಂಪೂರ್ಣ ಸುರಕ್ಷತೆಗಾಗಿ ಹೆಚ್ಚುವರಿ ಕ್ರಮಗಳನ್ನು ಕೈಗೊಂಡಿದ್ದಾರೆ.

ಜಲಾಶಯದ ನಾಲ್ಕು ಕ್ರೆಸ್ಟ್ ಗೇಟ್‌ಗಳು ಮತ್ತು ತಳದಲ್ಲಿರುವ ಮೂರು ಸ್ಲೂಸ್ ಗೇಟ್‌ಗಳನ್ನು ವರ್ಷಕ್ಕೆ ಎರಡು ಬಾರಿ ಪರಿಶೀಲಿಸಲಾಗುತ್ತದೆ. ತುಂಗಭದ್ರಾ ಅಣೆಕಟ್ಟೆಯ ಅನಾಹುತದ ನಂತರ ಜಲಾಶಯಗಳನ್ನು ತಾಂತ್ರಿಕ ತಜ್ಞರಿಂದ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹಾರಂಗಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ ತಿಳಿಸಿದ್ದಾರೆ. ಅಧಿಕಾರಿಗಳು ದಿನವಿಡೀ ಜಲಾಶಯದ ಒಳಹರಿವು ಮತ್ತು ಹೊರಹರಿವಿನ ಬಗ್ಗೆ ನಿಗಾ ಇಡುತ್ತಿದ್ದಾರೆ. ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ ಮತ್ತು ಅಣೆಕಟ್ಟಿನ ನೀರಿನ ಮಟ್ಟವನ್ನು ಕಾಯ್ದುಕೊಳ್ಳಲಾಗುತ್ತಿದೆ ಎಂದು ವಿವರಿಸಿದ್ದಾರೆ.

ಇದೇ ವೇಳೆ ಜಲಾಶಯದಲ್ಲಿನ ಹೂಳು ತೆಗೆಯುವಂತೆ ನಿವಾಸಿಗಳು ಅಧಿಕಾರಿಗಳಿಗೆ ಒತ್ತಾಯಿಸಿದರು. ಕೊಡಗಿನಲ್ಲಿ 2018 ರ ದುರಂತದ ನಂತರ ಸಮೀಕ್ಷೆಯ ಸಮಯದಲ್ಲಿ ಉಂಟಾದ ಪ್ರವಾಹ ಮತ್ತು ಭೂಕುಸಿತದಿಂದ ಹೂಳು ತುಂಬಿದ್ದರಿಂದ 1.25 ಟಿಎಂಸಿ ಅಡಿ ನೀರಿನ ಸಂಗ್ರಹ ಕಡಿಮೆಯಾಗಿದೆ ಎಂದು ಕಂಡುಬಂದಿದೆ. ಜಲಾಶಯದ ನಿರ್ವಹಣೆಗೆ ಸಂಬಂಧಿಸಿದಂತೆ ಪರಿಹಾರ ಕಾರ್ಯಗಳನ್ನು ನಡೆಸಲು 130 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದ್ದು, ಜಲಾಶಯದ ಪ್ರವಾಹ ತಡೆಗಟ್ಟಲು ರಿಟೈನಿಂಗ್ ವಾಲ್ ಮತ್ತು ಗೇಬಿಯನ್ ವಾಲ್ ಕಾಮಗಾರಿ ನಡೆಯುತ್ತಿವೆ. ಅದೇನೇ ಇದ್ದರೂ, ಹೆಚ್ಚಿದ ಹೂಳು ಸೇರಿಕೊಂಡಿರುವುದರಿಂದ ಅಣೆಕಟ್ಟಿನ ಸಂಗ್ರಹಣಾ ಸಾಮರ್ಥ್ಯಕ್ಕೆ ಅಡ್ಡಿಯಾಗಿದೆ ಮತ್ತು ಕಾವೇರಿ ಸ್ವಚ್ಛತಾ ಆಂದೋಲನ ಸೇರಿದಂತೆ ಹಲವಾರು ಸಂಘಟನೆಗಳು ಜಲಾಶಯದಲ್ಲಿ ಹೆಚ್ಚಿದ ಹೂಳು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಒತ್ತಾಯಿಸಿವೆ.

ಹಾರಂಗಿ ಜಲಾಶಯ
ಅಣೆಕಟ್ಟಿನ ಅಧಿಕಾರಿಗಳ ನೇಮಕಾತಿಯಲ್ಲಿ ರಾಜಕೀಯ ಹಸ್ತಕ್ಷೇಪ; ಆಯಕಟ್ಟಿನ ಹುದ್ದೆಗಳಲ್ಲಿ ಅನನುಭವಿಗಳಿಂದ ಎಡವಟ್ಟು: ತಜ್ಞರ ಅಭಿಪ್ರಾಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com