ಕಲಬುರಗಿ: ತರಗತಿಯಲ್ಲೇ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಶಿಕ್ಷಕನ ಬಂಧನ; ಪೊಕ್ಸೋ ಪ್ರಕರಣ ದಾಖಲು

ಸಂತ್ರಸ್ತ ಬಾಲಕಿ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದಳು. ಮಂಗಳವಾರ ಮಧ್ಯಾಹ್ನ ಊಟ ಮುಗಿಸಿ ಬಾಲಕಿ ತರಗತಿಗೆ ತೆರಳಿದ್ದ ವೇಳೆ ಆರೋಪಿ ಶಿಕ್ಷಕ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆದ ಸಂದರ್ಭದಲ್ಲಿ ಬಾಲಕಿ ತರಗತಿಯಲ್ಲಿ ಒಬ್ಬಳೇ ಇದ್ದಳು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಶಾಲಾ ತರಗತಿಯಲ್ಲಿ 11 ವರ್ಷದ ಶಾಲಾ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಶಿಕ್ಷಕನನ್ನು ಬಂಧಿಸಿರುವ ಘಟನೆ ಕಲಬುರಗಿಯಲ್ಲಿ ನಡದಿದೆ. ಜಿಲ್ಲೆಯ ಆಳಂದ ತಾಲೂಕಿನ ನಿಂಬರಗಾ ಪೊಲೀಸ್ ಠಾಣಾ ವ್ಯಾಪ್ತಿಯ ಸರಕಾರಿ ಶಾಲೆಯಲ್ಲಿ ಘಟನೆ ವರದಿಯಾಗಿದೆ.

ಸಂತ್ರಸ್ತ ಬಾಲಕಿ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದಳು. ಮಂಗಳವಾರ ಮಧ್ಯಾಹ್ನ ಊಟ ಮುಗಿಸಿ ಬಾಲಕಿ ತರಗತಿಗೆ ತೆರಳಿದ್ದ ವೇಳೆ ಆರೋಪಿ ಶಿಕ್ಷಕ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆದ ಸಂದರ್ಭದಲ್ಲಿ ಬಾಲಕಿ ತರಗತಿಯಲ್ಲಿ ಒಬ್ಬಳೇ ಇದ್ದಳು. ಗಲಾಟೆ ಮಾಡದಂತೆ ಬೆದರಿಸಿ ಅತ್ಯಾಚಾರಕ್ಕೆ ಶಿಕ್ಷಕ ಯತ್ನಿಸಿದ್ದಾನೆ. ಆದರೆ, ಬಾಲಕಿ ಪ್ರತಿರೋಧ ವ್ಯಕ್ತಪಡಿಸಿ ಸಹಾಯಕ್ಕಾಗಿ ಕಿರುಚಲು ಆರಂಭಿಸಿದಾಗ ಆರೋಪಿ ಶಿಕ್ಷಕ ಶಾಲಾ ಆವರಣದಿಂದ ಪರಾರಿಯಾಗಿದ್ದಾನೆ. ಸಂತ್ರಸ್ತೆ ತನ್ನ ಮನೆಗೆ ತೆರಳಿ ಘಟನೆಯ ಬಗ್ಗೆ ಪೋಷಕರಿಗೆ ತಿಳಿಸಿದ್ದಾಳೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪೋಷಕರು ಮೊದಲು ಮುಖ್ಯೋಪಾಧ್ಯಾಯರನ್ನು ವಿಚಾರಿಸಿ ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಶಿಕ್ಷಕನಿಗಾಗಿ ನಿಂಬರಗಾ ಪೊಲೀಸರು ಹುಡುಕಾಟ ನಡೆಸಿ ನಂತರ ಆತನನ್ನು ಬಂಧಿಸಿದ್ದಾರೆ. ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ತಡೆ ಕಾಯ್ದೆ (ಪೋಕ್ಸೊ) ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೋಕ್ಸೋ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿದೆ.

ಸಾಂದರ್ಭಿಕ ಚಿತ್ರ
82ನೇ ವಯಸ್ಸಿನಲ್ಲಿ ಪೋಕ್ಸೋ ಕೇಸ್ ಎದುರಿಸಿದ BSY ಗೆ ನನ್ನ ಬಗ್ಗೆ ಮಾತಾಡುವ ನೈತಿಕತೆ ಏನಿದೆ: ಸಿದ್ದರಾಮಯ್ಯ

ಕಳೆದ ಮೂರು ವರ್ಷಗಳಲ್ಲಿ ಅಪ್ರಾಪ್ತ ವಯಸ್ಕರ ಮೇಲಿನ ಅತ್ಯಾಚಾರ ಪ್ರಕರಣಗಳು ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ವರದಿಯಾದ ಪ್ರಕರಣಗಳಿಗಿಂತ ಮೂರು ಪಟ್ಟು ಹೆಚ್ಚಾಗಿದೆ ಎಂದು ಅಂಕಿಅಂಶಗಳು ತೋರಿಸಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜೂನ್‌ನಲ್ಲಿ ನಡೆದ 13 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರದ ಘಟನೆಯಿಂದ ಈ ಪ್ರದೇಶದಲ್ಲಿ ಪ್ರತಿಭಟನೆಗಳು ಮತ್ತು ರಸ್ತೆ ತಡೆಗಳು ನಡೆದವು. ಚಿಕಿತ್ಸೆ ವೇಳೆ ಸಂತ್ರಸ್ತೆ ಎಂಟು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ನಂತರ ಬಹು ಅಂಗಾಂಗ ವೈಫಲ್ಯದಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಆರೋಪಿಗಳು ಬಾಲಕಿಯ ಮೇಲೆ ಹಲವು ತಿಂಗಳುಗಳ ಕಾಲ ಅತ್ಯಾಚಾರ ಎಸಗಿದ್ದರು ಎನ್ನಲಾಗಿದೆ.

ಕಲಬುರಗಿ ಜಿಲ್ಲೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹುಟ್ಟೂರು ಮತ್ತು ಅವರ ಪುತ್ರ, ಆರ್‌ಡಿಪಿಆರ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ಕೂಡ ಕಲಬುರಗಿ ಜಿಲ್ಲೆಯವರೇ ಆಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com