ನಿರ್ಮಲ ತುಂಗಭದ್ರಾ ಅಭಿಯಾನ: ನವೆಂಬರ್ 4 ರಂದು ಶೃಂಗೇರಿಯಿಂದ ಆರಂಭ

ಶೃಂಗೇರಿಯಲ್ಲಿ ಕೇವಲ 40 ಸಾವಿರ ಜನಸಂಖ್ಯೆ ಇದ್ದರೂ ವರ್ಷಕ್ಕೆ ಸುಮಾರು ಒಂದು ಕೋಟಿ ಪ್ರವಾಸಿಗರು, ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ. ನಗರದಲ್ಲಿ ಚರಂಡಿ ವ್ಯವಸ್ಥೆ ಇದೆ ಆದರೆ ಯುಜಿಡಿ ವ್ಯವಸ್ಥೆ ಇಲ್ಲ. ಕಲುಷಿತ ನೀರನ್ನು ಶುದ್ಧೀಕರಿಸದೆ ನದಿಗೆ ಬಿಡಲಾಗುತ್ತಿದೆ.
ಶೃಂಗೇರಿಯ ತುಂಗಭದ್ರಾ ನದಿ ಸಾಂದರ್ಭಿಕ ಚಿತ್ರ
ಶೃಂಗೇರಿಯ ತುಂಗಭದ್ರಾ ನದಿ ಸಾಂದರ್ಭಿಕ ಚಿತ್ರ
Updated on

ಶೃಂಗೇರಿ: ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ಹಾಗೂ ಪರ್ಯಾಯ ಟ್ರಸ್ಟ್ ಸಹಯೋಗದಲ್ಲಿ ಶೃಂಗೇರಿಯಿಂದ ಗಂಗಾವತಿ ಬಳಿಯ ಕಿಷ್ಕಿಂದವರೆಗೆ 'ನಿರ್ಮಲಾ ತುಂಗಭದ್ರಾ ಅಭಿಯಾನ' 400 ಕಿಲೋ ಮೀಟರ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

ತುಂಗಭದ್ರಾ ನದಿ ಸ್ವಚ್ಛತೆ ಕುರಿತು ಜನಜಾಗೃತಿ ಮೂಡಿಸಲು ನವೆಂಬರ್ 4ರಿಂದ ಈ ಅಭಿಯಾನ ಆರಂಭವಾಗಲಿದೆ ಎಂದು ಪರಿಸರ ಪ್ರೇಮಿ ಮತ್ತು ಅಭಿಯಾನದ ಸಂಘಟಕ ಪ್ರೊಫೆಸರ್ ಬಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ಶೃಂಗೇರಿಯಂತಹ ಅನೇಕ ಪಟ್ಟಣಗಳಲ್ಲಿ ಸರಿಯಾದ ಒಳ ಚರಂಡಿ ವ್ಯವಸ್ಥೆಯಿಲ್ಲ. ಕಲುಷಿತ ನೀರು ನೇರವಾಗಿ ನದಿಗೆ ಸೇರುತ್ತಿದೆ. ಇಂತಹ ಸಮಸ್ಯೆಯನ್ನು ಸರ್ಕಾರ ಮತ್ತು ಸಾರ್ವಜನಿಕರ ಗಮನಕ್ಕೆ ತರುವುದು ಅಭಿಯಾನದ ಉದ್ದೇಶವಾಗಿದೆ.

ತುಂಗಭದ್ರಾ ನದಿ ಮೊದಲು ಶೃಂಗೇರಿಗೆ ಪ್ರವೇಶಿಸುವ ಕಾರಣ ಶೃಂಗೇರಿಯಿಂದಲೇ ಅಭಿಯಾನ ಆರಂಭಿಸಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಶೃಂಗೇರಿಯಲ್ಲಿ ಕೇವಲ 40 ಸಾವಿರ ಜನಸಂಖ್ಯೆ ಇದ್ದರೂ ವರ್ಷಕ್ಕೆ ಸುಮಾರು ಒಂದು ಕೋಟಿ ಪ್ರವಾಸಿಗರು, ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ. ನಗರದಲ್ಲಿ ಚರಂಡಿ ವ್ಯವಸ್ಥೆ ಇದೆ ಆದರೆ ಯುಜಿಡಿ ವ್ಯವಸ್ಥೆ ಇಲ್ಲ. ಕಲುಷಿತ ನೀರನ್ನು ಶುದ್ಧೀಕರಿಸದೆ ನದಿಗೆ ಬಿಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ತೀರ್ಥಹಳ್ಳಿ ನಗರದಲ್ಲಿಯೂ ಯುಜಿಡಿ ವ್ಯವಸ್ಥೆ ಇಲ್ಲದೇ ನದಿಗೆ ಕಲುಷಿತ ನೀರು ಸೇರುತ್ತಿದ್ದು, ಜಲಚರಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿದರು.

ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಮಾನವನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ನದಿ ಮಾಲಿನ್ಯವನ್ನು ನಿಲ್ಲಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು.

ಶೃಂಗೇರಿಯ ತುಂಗಭದ್ರಾ ನದಿ ಸಾಂದರ್ಭಿಕ ಚಿತ್ರ
ತುಂಗಭದ್ರಾ ಜಲಾಶಯ: ಮುರಿದ ಕ್ರಸ್ಟ್ ಗೇಟ್‌ನಲ್ಲಿ 'ಸ್ಟಾಪ್ ಲಾಗ್' ಅಳವಡಿಕೆ ನಿಜಕ್ಕೂ ಸವಾಲು!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com